<p>ಹಾಸನ: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಬಾಕಿ ಇದ್ದ, 5 ವರ್ಷಗಳಿಗಿಂತ ಹಳೆಯದಾದ 60 ಸಾವಿರ ಪ್ರಕರಣಗಳ ಪೈಕಿ 30 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, ಉಳಿದವುಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಸೂಚಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ನವೆಂಬರ್ ಅಂತ್ಯದೊಳಗೆ ಮುಗಿಸಲು ಸೂಚಿಸಲಾಗಿದೆ’ ಎಂದರು.</p>.<p>‘ನಾನು ಹೇಳಿದಾಕ್ಷಣ ಅಧಿಕಾರಿಗಳು ಮಾಡುವುದಿಲ್ಲ. ನಾವೇ ಅವರ ಬೆನ್ನು ಹತ್ತಬೇಕು. ಹೀಗಾಗಿಯೇ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಿದ್ದೇನೆ’ ಎಂದರು.</p>.<p>‘ಯಾವ ಕಡತ ಎಲ್ಲಿದೆ, ಯಾವ ಹಂತದಲ್ಲಿದೆ ಎಂಬ ಮಾಹಿತಿ ಇ-ಆಫೀಸ್ನಲ್ಲಿ ಬೆರಳ ತುದಿಯಲ್ಲಿ ಸಿಗಲಿದೆ. ನೂರರಷ್ಟು ಇ- ಆಫೀಸ್ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೊದಲು ದಾಖಲೆಗಳನ್ನು ಕಳೆದು ಹಾಕಲಾಗುತ್ತಿತ್ತು. ಜನ ಬಂದು ಕೈಮುಗಿದುಕೊಂಡು ನಿಲ್ಲಲಿ ಎಂದು ಕಡತಗಳನ್ನು ಬಾಕಿ ಇಡುವ ಪರಿಸ್ಥಿತಿಯೂ ಇತ್ತು. ಇ-ಆಫೀಸ್ ಮೂಲಕ ಕಂದಾಯ ದಾಖಲೆಗಳ ಡಿಜಿಟಲೀಕರಣದಿಂದ ಅದು ಕಡಿಮೆಯಾಗಲಿದೆ’ ಎಂದರು.</p>.<p>‘ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರ ಬಳಿ, ಅರ್ಜಿಗಳು 15 ದಿನಗಳಿಗಿಂತ ಹೆಚ್ಚು ದಿನ ಉಳಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಕುಳಿತು ಕಾಯ್ದೆ, ಕಾನೂನು ಜಾರಿಗೆ ತಂದರೆ ಸಾಲದು. ಅದಕ್ಕಾಗಿ ಬೃಹತ್ ಅಭಿಯಾನ ಮಾಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಬಾಕಿ ಇದ್ದ, 5 ವರ್ಷಗಳಿಗಿಂತ ಹಳೆಯದಾದ 60 ಸಾವಿರ ಪ್ರಕರಣಗಳ ಪೈಕಿ 30 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, ಉಳಿದವುಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಸೂಚಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ನವೆಂಬರ್ ಅಂತ್ಯದೊಳಗೆ ಮುಗಿಸಲು ಸೂಚಿಸಲಾಗಿದೆ’ ಎಂದರು.</p>.<p>‘ನಾನು ಹೇಳಿದಾಕ್ಷಣ ಅಧಿಕಾರಿಗಳು ಮಾಡುವುದಿಲ್ಲ. ನಾವೇ ಅವರ ಬೆನ್ನು ಹತ್ತಬೇಕು. ಹೀಗಾಗಿಯೇ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಿದ್ದೇನೆ’ ಎಂದರು.</p>.<p>‘ಯಾವ ಕಡತ ಎಲ್ಲಿದೆ, ಯಾವ ಹಂತದಲ್ಲಿದೆ ಎಂಬ ಮಾಹಿತಿ ಇ-ಆಫೀಸ್ನಲ್ಲಿ ಬೆರಳ ತುದಿಯಲ್ಲಿ ಸಿಗಲಿದೆ. ನೂರರಷ್ಟು ಇ- ಆಫೀಸ್ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೊದಲು ದಾಖಲೆಗಳನ್ನು ಕಳೆದು ಹಾಕಲಾಗುತ್ತಿತ್ತು. ಜನ ಬಂದು ಕೈಮುಗಿದುಕೊಂಡು ನಿಲ್ಲಲಿ ಎಂದು ಕಡತಗಳನ್ನು ಬಾಕಿ ಇಡುವ ಪರಿಸ್ಥಿತಿಯೂ ಇತ್ತು. ಇ-ಆಫೀಸ್ ಮೂಲಕ ಕಂದಾಯ ದಾಖಲೆಗಳ ಡಿಜಿಟಲೀಕರಣದಿಂದ ಅದು ಕಡಿಮೆಯಾಗಲಿದೆ’ ಎಂದರು.</p>.<p>‘ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರ ಬಳಿ, ಅರ್ಜಿಗಳು 15 ದಿನಗಳಿಗಿಂತ ಹೆಚ್ಚು ದಿನ ಉಳಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಕುಳಿತು ಕಾಯ್ದೆ, ಕಾನೂನು ಜಾರಿಗೆ ತಂದರೆ ಸಾಲದು. ಅದಕ್ಕಾಗಿ ಬೃಹತ್ ಅಭಿಯಾನ ಮಾಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>