ಅಂತೆಯೇ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಇಲ್ಲವೇ ಅವರ ಪುತ್ರ ಡಾ.ಯತೀಂದ್ರ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ ಹೀಗೆ ಕಾಂಗ್ರೆಸ್ ಕುಟುಂಬ ರಾಜಕಾರಣ ಹೇಳುತ್ತಾ ಹೋದರೆ ಪಟ್ಟಿ ದೊಡ್ಡದಾಗಿ ಬೆಳೆಯಲಿದೆ. ಅದೇ ರೀತಿ ಯಡಿಯೂರಪ್ಪ ಅಥವಾ ಅವರ ಪುತ್ರರು, ಜಾರಕಿಹೊಳಿ ಸಹೋದರರು, ಜಗದೀಶ್ ಶೆಟ್ಟರ್ ಕುಟುಂಬದಲ್ಲಿ ಅನೇಕರು ಸಕ್ರಿಯ ರಾಜಕೀಯದಲ್ಲಿದ್ದಾರೆ. ಇವರಲ್ಲಿ ಒಬ್ಬೊಬ್ಬರು ರಾಜಕಾರಣ ಮಾಡಲಿ. ಆ ನಂತರ ಜೆಡಿಎಸ್ ಬಗ್ಗೆ ಮಾತನಾಡಲಿ ಎಂದು ಹೇಳಿದರು.