ರೈತರು ಖರೀದಿಸಿದ ಬಿತ್ತನೆ ಬೀಜಕ್ಕೆ ಕಡ್ಡಾಯವಾಗಿ ರಶೀದಿ ಪಡೆಯಬೇಕು. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಎಪಿಎಂಸಿ ಆವರಣದಲ್ಲೇ ನೋಂದಣಿ ಕಾರ್ಯ ಕೈಗೊಳ್ಳಲಿದ್ದು, ರೈತರು ಬಿಲ್ನೊಂದಿಗೆ ಆಧಾರ್ ಕಾರ್ಡ್, ಪಹಣಿ, ಪಾಸ್ಬುಕ್, ಜಾತಿ ಪ್ರಮಾಣಪತ್ರ ಫೋಟೊಗಳೊಂದಿಗೆ ನೋಂದಣಿ ಮಾಡಿಸಿದಲ್ಲಿ ಶೇಕಡಾ 50 ರಷ್ಟು ಸಬ್ಸಿಡಿ ಹಣ ಹಾಗೂ ಔಷಧಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.