<p><strong>ಹಾಸನ: </strong>ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ಮತ್ತು ಆಲೂರು ತಾಲ್ಲೂಕಿನ ಶಾಲೆಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.</p>.<p>ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಸನ ತಾಲ್ಲೂಕಿನ 29 ಶಾಲೆಗಳಲ್ಲಿನ 228 ವಿದ್ಯಾರ್ಥಿಗಳಿಗೆ ಹಾಗೂ ಆಲೂರು ತಾಲ್ಲೂಕಿನ 39 ಶಾಲೆಗಳ 166 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಎರಡೂ<br />ತಾಲ್ಲೂಕುಗಳಲ್ಲಿ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ. ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಇರುವುದರಿಂದ ಒಟ್ಟು ಐದು ದಿನ ರಜೆ ಸಿಗಲಿದೆ’ ಎಂದು ವಿವರಿಸಿದರು.</p>.<p>‘ಜ. 24ರಿಂದ ಮತ್ತೆ ಶಾಲೆಗಳನ್ನು ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಂತರದ ಅಂಕಿ ಅಂಶಗಳನ್ನು ಗಮನಿಸಿ ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.</p>.<p>‘ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದು, ಕೋವಿಡ್ ಸೋಂಕು ಕಂಡುಬರುವ ಎಲ್ಲ ವಯೋ ಮಾನದವರಿಗೆ ಹೋಂ ಕ್ವಾರಂಟೈನ್ ಮಾಡಬೇಕು. ಶೌಚಾಲಯ ಇನ್ನಿತರ ಮೂಲ ಸೌಕರ್ಯಗಳಿಲ್ಲದ ಸೋಂಕಿತ ರನ್ನು ಕೋವಿಡ್ ಆರೈಕೆ ಕೇಂದ್ರಗಳಲ್ಲಿ 7 ರಿಂದ 8 ದಿನ ಚಿಕಿತ್ಸೆ, ಔಷಧೋಪಚಾರ ನೀಡಿ ಗುಣಮುಖರಾದ ನಂತರ ಬಿಡುಗಡೆಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಮಂಗಳವಾರ ಜಿಲ್ಲೆಯಲ್ಲಿ 1ರಿಂದ 10 ತರಗತಿಯವರೆಗಿನ 119 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು ಒಟ್ಟು 475 ವಿದ್ಯಾರ್ಥಿಗಳಲ್ಲಿ ಸೋಂಕು ಸಕ್ರಿಯವಾಗಿದೆ. 9 ಕೋವಿಡ್ ಆರೈಕೆ ಕೇಂದ್ರಗಳನ್ನು ಗುರುತಿಸಿದ್ದು, 129 ಕೊಠಡಿಗಳಲ್ಲಿ 450 ಹಾಸಿಗೆ ಸಿದ್ಧಪಡಿಸಲಾಗಿದೆ. ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ವಾರ್ ರೂಂ ತೆರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಆರೈಕೆಗೆ ಸದ್ಯಕ್ಕೆ ಯಾವುದೇ ಕೊರತೆಗಳಿಲ್ಲ ಎಂದು ಹಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಪತ್ತೆಯಾಗಿರುವ ಸೋಂಕಿತರಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಅವರ ಮನೆಗಳಿಗೆ ಮಾತ್ರಗಳನ್ನು ತಲುಪಿಸಲು ಮೊದಲ ಆದ್ಯತೆ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್, ಜಿ.ಪಂ ಸಿಇಒ ಕಾಂತರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್, ಶಾಸಕ ಕೆ.ಎಂ. ಶಿವಲಿಂಗೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ಮತ್ತು ಆಲೂರು ತಾಲ್ಲೂಕಿನ ಶಾಲೆಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.</p>.<p>ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಸನ ತಾಲ್ಲೂಕಿನ 29 ಶಾಲೆಗಳಲ್ಲಿನ 228 ವಿದ್ಯಾರ್ಥಿಗಳಿಗೆ ಹಾಗೂ ಆಲೂರು ತಾಲ್ಲೂಕಿನ 39 ಶಾಲೆಗಳ 166 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಎರಡೂ<br />ತಾಲ್ಲೂಕುಗಳಲ್ಲಿ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ. ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಇರುವುದರಿಂದ ಒಟ್ಟು ಐದು ದಿನ ರಜೆ ಸಿಗಲಿದೆ’ ಎಂದು ವಿವರಿಸಿದರು.</p>.<p>‘ಜ. 24ರಿಂದ ಮತ್ತೆ ಶಾಲೆಗಳನ್ನು ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಂತರದ ಅಂಕಿ ಅಂಶಗಳನ್ನು ಗಮನಿಸಿ ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.</p>.<p>‘ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದು, ಕೋವಿಡ್ ಸೋಂಕು ಕಂಡುಬರುವ ಎಲ್ಲ ವಯೋ ಮಾನದವರಿಗೆ ಹೋಂ ಕ್ವಾರಂಟೈನ್ ಮಾಡಬೇಕು. ಶೌಚಾಲಯ ಇನ್ನಿತರ ಮೂಲ ಸೌಕರ್ಯಗಳಿಲ್ಲದ ಸೋಂಕಿತ ರನ್ನು ಕೋವಿಡ್ ಆರೈಕೆ ಕೇಂದ್ರಗಳಲ್ಲಿ 7 ರಿಂದ 8 ದಿನ ಚಿಕಿತ್ಸೆ, ಔಷಧೋಪಚಾರ ನೀಡಿ ಗುಣಮುಖರಾದ ನಂತರ ಬಿಡುಗಡೆಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಮಂಗಳವಾರ ಜಿಲ್ಲೆಯಲ್ಲಿ 1ರಿಂದ 10 ತರಗತಿಯವರೆಗಿನ 119 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು ಒಟ್ಟು 475 ವಿದ್ಯಾರ್ಥಿಗಳಲ್ಲಿ ಸೋಂಕು ಸಕ್ರಿಯವಾಗಿದೆ. 9 ಕೋವಿಡ್ ಆರೈಕೆ ಕೇಂದ್ರಗಳನ್ನು ಗುರುತಿಸಿದ್ದು, 129 ಕೊಠಡಿಗಳಲ್ಲಿ 450 ಹಾಸಿಗೆ ಸಿದ್ಧಪಡಿಸಲಾಗಿದೆ. ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ವಾರ್ ರೂಂ ತೆರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಆರೈಕೆಗೆ ಸದ್ಯಕ್ಕೆ ಯಾವುದೇ ಕೊರತೆಗಳಿಲ್ಲ ಎಂದು ಹಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಪತ್ತೆಯಾಗಿರುವ ಸೋಂಕಿತರಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಅವರ ಮನೆಗಳಿಗೆ ಮಾತ್ರಗಳನ್ನು ತಲುಪಿಸಲು ಮೊದಲ ಆದ್ಯತೆ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್, ಜಿ.ಪಂ ಸಿಇಒ ಕಾಂತರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್, ಶಾಸಕ ಕೆ.ಎಂ. ಶಿವಲಿಂಗೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>