<p><strong>ಆಲೂರು</strong>: ‘ಕೆರೆ, ಕಟ್ಟೆಗಳನ್ನು ಉಳಿಸಿಕೊಳ್ಳದಿದ್ದರೆ ಭವಿಷ್ಯದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ’ ಎಂದು ಶಾಸಕ ಸಿಮೆಂಟ್ ಮಂಜು ಆತಂಕ ವ್ಯಕ್ತಪಡಿಸಿದರು.</p>.<p>ಕುಂದೂರು ಹೋಬಳಿ ಗಂಗರ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ದೊಡ್ಡಕೆರೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ದುರಸ್ತಿ ಕಾಮಗಾರಿ ನಡೆಯಲಿದೆ. ಏರಿಯ ಜಗಲ್ ತೆಗೆದು ದುರಸ್ತಿ, ಕೆರೆ ತೂಬು ಮತ್ತು ಕೋಡಿ ದುರಸ್ತಿ, ಕೋಡಿ ಹಳ್ಳ ಹಾಗೂ ಏರಿ ತಳಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಕೆರೆ ದುರಸ್ತಿ ಮಾಡುವುದರಿಂದ ಸುಮಾರು 100 ಎಕರೆ ಪ್ರದೇಶಕ್ಕೆ ಸಮರ್ಪಕ ನೀರಾವರಿ ಸೌಲಭ್ಯ ದೊರಕುತ್ತದೆ. ಕೆರೆಯಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳವಾಗುತ್ತದೆ, ಅಂತರ್ಜಲ ಮಟ್ಟ ಹೆಚ್ಚುತ್ತದೆ’ ಎಂದರು.</p>.<p>ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-36-1281405349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು</strong>: ‘ಕೆರೆ, ಕಟ್ಟೆಗಳನ್ನು ಉಳಿಸಿಕೊಳ್ಳದಿದ್ದರೆ ಭವಿಷ್ಯದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ’ ಎಂದು ಶಾಸಕ ಸಿಮೆಂಟ್ ಮಂಜು ಆತಂಕ ವ್ಯಕ್ತಪಡಿಸಿದರು.</p>.<p>ಕುಂದೂರು ಹೋಬಳಿ ಗಂಗರ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ದೊಡ್ಡಕೆರೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ದುರಸ್ತಿ ಕಾಮಗಾರಿ ನಡೆಯಲಿದೆ. ಏರಿಯ ಜಗಲ್ ತೆಗೆದು ದುರಸ್ತಿ, ಕೆರೆ ತೂಬು ಮತ್ತು ಕೋಡಿ ದುರಸ್ತಿ, ಕೋಡಿ ಹಳ್ಳ ಹಾಗೂ ಏರಿ ತಳಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಕೆರೆ ದುರಸ್ತಿ ಮಾಡುವುದರಿಂದ ಸುಮಾರು 100 ಎಕರೆ ಪ್ರದೇಶಕ್ಕೆ ಸಮರ್ಪಕ ನೀರಾವರಿ ಸೌಲಭ್ಯ ದೊರಕುತ್ತದೆ. ಕೆರೆಯಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳವಾಗುತ್ತದೆ, ಅಂತರ್ಜಲ ಮಟ್ಟ ಹೆಚ್ಚುತ್ತದೆ’ ಎಂದರು.</p>.<p>ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-36-1281405349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>