<p>ಆಲೂರು: ‘ಮಹಾತ್ಮರ ಆದರ್ಶಗಳ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕವಾಗುತ್ತದೆ’ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ತಿಳಿಸಿದರು.</p>.<p>ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬಾಬು ಜಗಜೀವನರಾಂ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರತಿಯೊಬ್ಬ ಮಹಾತ್ಮರು ಸಮಾನತೆಗೆ ಮಾನ್ಯತೆ ನೀಡಿದ್ದಾರೆ. ಜನಸಾಮಾನ್ಯರಿಗೆ ಅವರ ಆದರ್ಶಗಳ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತದೆ’ ಎಂದರು.</p>.<p>ಸಾಹಿತಿ ಎಂ.ಜಿ.ಪರಮೇಶ್ ಮಡಬಲು ಮಾತನಾಡಿ, ‘ಬಾಬು ಜಗಜೀವನರಾಂ ಅವರು ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಶೋಷಿತ ವರ್ಗದ ಅಭಿವೃದ್ಧಿಗೆ ಶ್ರಮಿಸಿದರು. ಅವರು ಹಾಗೂ ಬಿ.ಆರ್.ಅಂಬೇಡ್ಕರ್, ಸಮಾನತೆ, ಶಿಕ್ಷಣ ಜಾಗೃತಿ ಮೂಲಕ ಶೋಷಿತರು ತಮ್ಮ ಹಕ್ಕುಗಳನ್ನು ಪಡೆಯುವಂತೆ ಶ್ರಮಿಸಿದರು’ ಎಂದರು.</p>.<p>ಬಾಬು ಜಗಜೀವನರಾಂ ಅವರ ಭಾವಚಿತ್ರವನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.</p>.<p>ಸಮುದಾಯದಲ್ಲಿ ಸಾಧನೆ ಮಾಡಿದ ಬನ್ನಾರಿ ಆಲೂರು, ನಿವೃತ್ತ ಶಿಕ್ಷಕ ಎ.ಟಿ.ಮಂಜುನಾಥ್, ಪ.ಪಂ.ಮಾಜಿ ಸದಸ್ಯೆ ರತ್ನಮ್ಮ ಮತ್ತು ವಿದ್ಯಾರ್ಥಿಗಳಾದ ರತನ್, ಹರ್ಷಿಣಿ, ಸಿಂಚನ, ದೇವರಾಜು ಅವರನ್ನು ಸನ್ಮಾನಿಸಲಾಯಿತು.</p>.<p>ಮಾದಿಗ ದಂಡೊರ ಸಮಿತಿ ಅಧ್ಯಕ್ಷ ಪುಟ್ಟರಾಜು, ಸಮಾಜದ ಮುಖಂಡರಾದ ಬಸವರಾಜು, ರಂಗಯ್ಯ, ಪುಟ್ಟರಾಜು, ವೆಂಕಟಯ್ಯ, ದೇವರಾಜು, ಅರಸಯ್ಯ, ಬಿಆರ್ಸಿ ನಾಗರಾಜ್, ಪ.ಪಂ.ಮುಖ್ಯಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹ್ಮದ್, ವೇದಾವತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-36-1992157168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ‘ಮಹಾತ್ಮರ ಆದರ್ಶಗಳ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕವಾಗುತ್ತದೆ’ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ತಿಳಿಸಿದರು.</p>.<p>ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬಾಬು ಜಗಜೀವನರಾಂ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರತಿಯೊಬ್ಬ ಮಹಾತ್ಮರು ಸಮಾನತೆಗೆ ಮಾನ್ಯತೆ ನೀಡಿದ್ದಾರೆ. ಜನಸಾಮಾನ್ಯರಿಗೆ ಅವರ ಆದರ್ಶಗಳ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತದೆ’ ಎಂದರು.</p>.<p>ಸಾಹಿತಿ ಎಂ.ಜಿ.ಪರಮೇಶ್ ಮಡಬಲು ಮಾತನಾಡಿ, ‘ಬಾಬು ಜಗಜೀವನರಾಂ ಅವರು ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಶೋಷಿತ ವರ್ಗದ ಅಭಿವೃದ್ಧಿಗೆ ಶ್ರಮಿಸಿದರು. ಅವರು ಹಾಗೂ ಬಿ.ಆರ್.ಅಂಬೇಡ್ಕರ್, ಸಮಾನತೆ, ಶಿಕ್ಷಣ ಜಾಗೃತಿ ಮೂಲಕ ಶೋಷಿತರು ತಮ್ಮ ಹಕ್ಕುಗಳನ್ನು ಪಡೆಯುವಂತೆ ಶ್ರಮಿಸಿದರು’ ಎಂದರು.</p>.<p>ಬಾಬು ಜಗಜೀವನರಾಂ ಅವರ ಭಾವಚಿತ್ರವನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.</p>.<p>ಸಮುದಾಯದಲ್ಲಿ ಸಾಧನೆ ಮಾಡಿದ ಬನ್ನಾರಿ ಆಲೂರು, ನಿವೃತ್ತ ಶಿಕ್ಷಕ ಎ.ಟಿ.ಮಂಜುನಾಥ್, ಪ.ಪಂ.ಮಾಜಿ ಸದಸ್ಯೆ ರತ್ನಮ್ಮ ಮತ್ತು ವಿದ್ಯಾರ್ಥಿಗಳಾದ ರತನ್, ಹರ್ಷಿಣಿ, ಸಿಂಚನ, ದೇವರಾಜು ಅವರನ್ನು ಸನ್ಮಾನಿಸಲಾಯಿತು.</p>.<p>ಮಾದಿಗ ದಂಡೊರ ಸಮಿತಿ ಅಧ್ಯಕ್ಷ ಪುಟ್ಟರಾಜು, ಸಮಾಜದ ಮುಖಂಡರಾದ ಬಸವರಾಜು, ರಂಗಯ್ಯ, ಪುಟ್ಟರಾಜು, ವೆಂಕಟಯ್ಯ, ದೇವರಾಜು, ಅರಸಯ್ಯ, ಬಿಆರ್ಸಿ ನಾಗರಾಜ್, ಪ.ಪಂ.ಮುಖ್ಯಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹ್ಮದ್, ವೇದಾವತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-36-1992157168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>