<p>ಆಲೂರು: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಸಿಮೆಂಟ್ ಮಂಜುರವರು ಕೆರೆ, ಕೆರೆ ಕೋಡಿ ಅಭಿವೃದ್ಧಿ ಮತ್ತು ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ಕೆರೆಗಳ ದುರಸ್ತಿ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡುವುದರಿಂದ ನೂರಾರು ಎಕರೆ ಭೂ ಪ್ರದೇಶಕ್ಕೆ ಬೆಳೆ ಮಾಡಲು ಅನುಕೂಲವಾಗಲಿದೆ. ರೈತರಿಗೆ ಒಂದು ಹನಿ ನೀರು ಸಹ ವರದಾನವಾಗಿದೆ. ನೀರು ಪೋಲಾಗದಂತೆ ತಡೆದು ಕೃಷಿಗೆ ಉಪಯೋಗ ಮಾಡಿಕೊಳ್ಳಬೇಕು. ಈ ಉದ್ದೇಶದಿಂದ ಕೆರೆ, ಕೆರೆ ಕೋಡಿಗಳ ಅಭಿವೃದ್ಧಿ ಮತ್ತು ಅಗತ್ಯವಿರುವ ಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ ಎಂದರು.</p>.<p>ಸರ್ಕಾರದಿಂದ ದೊರಕುವ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸ್ಥಳೀಯರು, ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗೃತರಾಗಿರಬೇಕು. ಶಾಶ್ವತ ಮತ್ತು ಗುಣಮಟ್ಟದ ಕೆಲಸ ಮಾಡಿದರೆ ಜನಸಾಮಾನ್ಯರು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಸದಾ ಸ್ಮರಿಸುತ್ತಾರೆ ಎಂದರು.</p>.<p>ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿ ವಾಸುದೇವರನಹಳ್ಳಿ ಗ್ರಾಮದ ಪರಿಮಿತಿಯಲ್ಲಿ, ಹಳ್ಳಕ್ಕೆ ಅಡ್ಡಲಾಗಿ ₹56.50 ಲಕ್ಷ, ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ₹53 ಲಕ್ಷ ವೆಚ್ಚದಲ್ಲಿ ಹೊಸಕಟ್ಟೆ ಕೆರೆ ಅಭಿವೃದ್ಧಿ, ಇದೇ ಗ್ರಾಮದಲ್ಲಿ ₹1.12 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ, ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ ₹19.5 ಲಕ್ಷ ವೆಚ್ಚದಲ್ಲಿ ಕೆರೆ ಕೋಡಿ ಅಭಿವೃದ್ಧಿ ಮತ್ತು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುದೇವರಹಳ್ಳಿ ಗ್ರಾಮದ ಪರಿಮಿತಿಯಲ್ಲಿ ₹56.50 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು, ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-36-168485022</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಸಿಮೆಂಟ್ ಮಂಜುರವರು ಕೆರೆ, ಕೆರೆ ಕೋಡಿ ಅಭಿವೃದ್ಧಿ ಮತ್ತು ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ಕೆರೆಗಳ ದುರಸ್ತಿ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡುವುದರಿಂದ ನೂರಾರು ಎಕರೆ ಭೂ ಪ್ರದೇಶಕ್ಕೆ ಬೆಳೆ ಮಾಡಲು ಅನುಕೂಲವಾಗಲಿದೆ. ರೈತರಿಗೆ ಒಂದು ಹನಿ ನೀರು ಸಹ ವರದಾನವಾಗಿದೆ. ನೀರು ಪೋಲಾಗದಂತೆ ತಡೆದು ಕೃಷಿಗೆ ಉಪಯೋಗ ಮಾಡಿಕೊಳ್ಳಬೇಕು. ಈ ಉದ್ದೇಶದಿಂದ ಕೆರೆ, ಕೆರೆ ಕೋಡಿಗಳ ಅಭಿವೃದ್ಧಿ ಮತ್ತು ಅಗತ್ಯವಿರುವ ಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ ಎಂದರು.</p>.<p>ಸರ್ಕಾರದಿಂದ ದೊರಕುವ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸ್ಥಳೀಯರು, ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗೃತರಾಗಿರಬೇಕು. ಶಾಶ್ವತ ಮತ್ತು ಗುಣಮಟ್ಟದ ಕೆಲಸ ಮಾಡಿದರೆ ಜನಸಾಮಾನ್ಯರು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಸದಾ ಸ್ಮರಿಸುತ್ತಾರೆ ಎಂದರು.</p>.<p>ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿ ವಾಸುದೇವರನಹಳ್ಳಿ ಗ್ರಾಮದ ಪರಿಮಿತಿಯಲ್ಲಿ, ಹಳ್ಳಕ್ಕೆ ಅಡ್ಡಲಾಗಿ ₹56.50 ಲಕ್ಷ, ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ₹53 ಲಕ್ಷ ವೆಚ್ಚದಲ್ಲಿ ಹೊಸಕಟ್ಟೆ ಕೆರೆ ಅಭಿವೃದ್ಧಿ, ಇದೇ ಗ್ರಾಮದಲ್ಲಿ ₹1.12 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ, ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ ₹19.5 ಲಕ್ಷ ವೆಚ್ಚದಲ್ಲಿ ಕೆರೆ ಕೋಡಿ ಅಭಿವೃದ್ಧಿ ಮತ್ತು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುದೇವರಹಳ್ಳಿ ಗ್ರಾಮದ ಪರಿಮಿತಿಯಲ್ಲಿ ₹56.50 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು, ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-36-168485022</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>