<p>ಆಲೂರು: ‘ಮಳೆಯಿಂದ ಮನೆ ಹಾನಿಗೊಳಗಾದವರಿಗೆ ಸರ್ಕಾರದಿಂದ ದೊರಕುವ ಪರಿಹಾರ ಧನವನ್ನು ಶೀಘ್ರ ತಲುಪಿಸಬೇಕು’ ಎಂದು ಶಾಸಕ ಸಿಮೆಂಟ್ ಮಂಜು ತಹಶೀಲ್ದಾರ್ ಅವರಿಗೆ ಸೂಚಿಸಿದರು.</p>.<p>ಶುಕ್ರವಾರ ಸುರಿದ ಭಾರಿ ಮಳೆಯಿಂದ ಗೇಕರವಳ್ಳಿ ಮತ್ತು ಕಗ್ಗರವಳ್ಳಿ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಎರಡೂ ಗ್ರಾಮಗಳಲ್ಲಿ ಸುಮಾರು 14ಕ್ಕೂ ಹೆಚ್ಚು ಮನೆಗಳ ಹೆಂಚು ಮತ್ತು ಶೀಟ್ ಹಾರಿ ಹೋಗಿರುವುದರಿಂದ, ನಿವಾಸಿಗಳು ವಾಸ ಮಾಡುವುದು ಕಷ್ಟವಾಗಿದೆ. ಕೂಡಲೇ ಪರಿಹಾರ ಕೊಡಲು ಕ್ರಮ ಕೈಗೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಮಲ್ಲಿಕಾರ್ಜುನ ಅವರು ಪ್ರತಿಕ್ರಿಯಿಸಿ, ‘ಈ ಬಗ್ಗೆ ಗ್ರಾಮ ಆಡಳಿತಾಧಿಕಾರಿ ಮತ್ತು ಪಿಆರ್ಡಿಇ ಎಂಜಿನಿಯರ್ ವರದಿ ನೀಡಿದ ನಂತರ, ಸರ್ಕಾರದ ಸುತ್ತೋಲೆಯಂತೆ ಅಧಿಕೃತ ನಿವಾಸಿಗಳಿಗೆ ಪರಿಹಾರ ಚೆಕ್ ವಿತರಿಸಲಾಗುವುದು’ ಎಂದರು.</p>.<p>‘ಮಳೆ, ಗಾಳಿಯಿಂದ ತಾಲ್ಲೂಕಿನಲ್ಲಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿವೆ. ದುರಸ್ತಿ ಕಾರ್ಯ ಸಾಗಿದೆ’ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-36-404448278</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ‘ಮಳೆಯಿಂದ ಮನೆ ಹಾನಿಗೊಳಗಾದವರಿಗೆ ಸರ್ಕಾರದಿಂದ ದೊರಕುವ ಪರಿಹಾರ ಧನವನ್ನು ಶೀಘ್ರ ತಲುಪಿಸಬೇಕು’ ಎಂದು ಶಾಸಕ ಸಿಮೆಂಟ್ ಮಂಜು ತಹಶೀಲ್ದಾರ್ ಅವರಿಗೆ ಸೂಚಿಸಿದರು.</p>.<p>ಶುಕ್ರವಾರ ಸುರಿದ ಭಾರಿ ಮಳೆಯಿಂದ ಗೇಕರವಳ್ಳಿ ಮತ್ತು ಕಗ್ಗರವಳ್ಳಿ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಎರಡೂ ಗ್ರಾಮಗಳಲ್ಲಿ ಸುಮಾರು 14ಕ್ಕೂ ಹೆಚ್ಚು ಮನೆಗಳ ಹೆಂಚು ಮತ್ತು ಶೀಟ್ ಹಾರಿ ಹೋಗಿರುವುದರಿಂದ, ನಿವಾಸಿಗಳು ವಾಸ ಮಾಡುವುದು ಕಷ್ಟವಾಗಿದೆ. ಕೂಡಲೇ ಪರಿಹಾರ ಕೊಡಲು ಕ್ರಮ ಕೈಗೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಮಲ್ಲಿಕಾರ್ಜುನ ಅವರು ಪ್ರತಿಕ್ರಿಯಿಸಿ, ‘ಈ ಬಗ್ಗೆ ಗ್ರಾಮ ಆಡಳಿತಾಧಿಕಾರಿ ಮತ್ತು ಪಿಆರ್ಡಿಇ ಎಂಜಿನಿಯರ್ ವರದಿ ನೀಡಿದ ನಂತರ, ಸರ್ಕಾರದ ಸುತ್ತೋಲೆಯಂತೆ ಅಧಿಕೃತ ನಿವಾಸಿಗಳಿಗೆ ಪರಿಹಾರ ಚೆಕ್ ವಿತರಿಸಲಾಗುವುದು’ ಎಂದರು.</p>.<p>‘ಮಳೆ, ಗಾಳಿಯಿಂದ ತಾಲ್ಲೂಕಿನಲ್ಲಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿವೆ. ದುರಸ್ತಿ ಕಾರ್ಯ ಸಾಗಿದೆ’ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-36-404448278</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>