<p><strong>ಆಲೂರು</strong>: ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಟ್ಟಣ ಪಂಚಾಯಿತಿ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.</p>.<p>ಬೀದಿ ನಾಯಿಗಳನ್ನು ಬೋನುಗಳಲ್ಲಿ ಸೆರೆ ಹಿಡಿಯುತ್ತಿದ್ದಾರೆ.</p>.<p>ಸುತ್ತಲಿನ ಹಳ್ಳಿಗಳಲ್ಲಿದ್ದ ನೂರಾರು ಬೀದಿ ನಾಯಿಗಳು ಪಟ್ಟಣಕ್ಕೆ ಬಂದು ಹಗಲಿರುಳು ಜನರಿಗೆ ತೊಂದರೆ ನೀಡುತ್ತಿದ್ದವು. ವರ್ಷಕ್ಕೆ 2–3 ಬಾರಿ ಸಂತಾನೋತ್ಪತ್ತಿ ಮಾಡುತ್ತಿದ್ದುದರಿಂದ ಬೀದಿ ನಾಯಿಗಳ ಹಾವಳಿ ಅತಿಯಾಗಿತ್ತು. ಜನರು, ವಿದ್ಯಾರ್ಥಿಗಳು, ಮಕ್ಕಳು ಬೀದಿಯಲ್ಲಿ ತಿರುಗಾಡಲು ಭಯಪಡುವಂತಾಗಿತ್ತು.</p>.<p>ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲದೇ ಜಾನುವಾರುಗಳ ಮೇಲೆಯೂ ದಾಳಿ ಮಾಡುತ್ತಿದ್ದವು. ಈಗಾಗಲೇ ಅನೇಕ ಜನರಿಗೆ ಕಚ್ಚಿದ್ದು, ದನ ಕರುಗಳಿಗೂ ಕಚ್ಚಿ ಗಾಯಗೊಳಿಸಿದ್ದವು.</p>.<p>ಶಾಲೆ, ಕಾಲೇಜು, ಬಸ್ನಿಲ್ದಾಣ, ನ್ಯಾಯಾಲಯ, ರೈಲ್ವೆ ಸ್ಟೇಷನ್ ಸೇರಿದಂತೆ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಬೀದಿ ನಾಯಿಗಳು ಇರಬಾರದು ಎಂದು ನ್ಯಾಯಾಲಯ ಆದೇಶ ಮಾಡಿದೆ. ಅದರಂತೆ ಸ್ಥಳೀಯ ಪಟ್ಟಣ ಪಂಚಾಯಿತಿಯಿಂದ ಬೀದಿಗಳಲ್ಲಿ ಅಲೆದಾಡುತ್ತಿದ್ದ ನಾಯಿಗಳನ್ನು ಹಿಡಿದು ಸೊಪ್ಪಿನಹಳ್ಳಿ ಬಳಿ ಬೋನುಗಳಲ್ಲಿ ಬಂಧಿಸಿಡುತ್ತಿದ್ದಾರೆ. ಟೆಂಡರ್ದಾರರು ಈ ನಾಯಿಗಳಿಗೆ ಪ್ರತಿದಿನ ಊಟೋಪಚಾರ ಮಾಡುತ್ತಿದ್ದಾರೆ.</p>.<p>‘ಹಿಡಿದಿರುವ ನಾಯಿಗಳ ಪೈಕಿ ಈಗಾಗಲೇ 30 ನಾಯಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಂತರ ಅವುಗಳ ಆರೈಕೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಕಡಿಮೆಯಾಗುವ ನಿರೀಕ್ಷೆ ಇದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಬೀದಿ ನಾಯಿಗಳ ಉಪಟಳದಿಂದ ಬೇಸತ್ತಿದ್ದ ಜನರು ಇದೀಗ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನಾಯಿಗಳನ್ನು ಹಿಡಿಯುತ್ತಿರುವುದರಿಂದ ಬೀದಿಗಳಲ್ಲಿ ಹಾವಳಿ ಸ್ವಲ್ಪ ಕಡಿಮೆಯಾಗಿದೆ.</p>.<p>55 ನಾಯಿಗಳನ್ನು ಹಿಡಿದು ಕೇಜ್ನಲ್ಲಿ ಇಡಲಾಗಿದ್ದು, ಶಸ್ತ್ರಚಿಕಿತ್ಸೆ ನಂತರ 6-8 ದಿನಗಳ ಕಾಲ ಆರೈಕೆ ಮಾಡಲಾಗುತ್ತದೆ. ನಂತರ ಅವುಗಳನ್ನು ಹಿಡಿದ ಜಾಗಕ್ಕೆ ತಂದು ಬಿಡಲಾಗುವುದು</p><p> <strong>–ಮಂಜುನಾಥ್, ಪ.ಪಂ. ಮುಖ್ಯಾಧಿಕಾರಿ</strong></p>.<p>ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡುತ್ತಿರುವುದು ಉತ್ತಮ ಕೆಲಸ. ಇದರಿಂದ ಬೀದಿ ನಾಯಿ ಹಾವಳಿ ಕಡಿಮೆ ಆಗಲಿದೆ.</p><p> – <strong>ಅಸ್ಲಂ ಪಾಷಾ, ಉಪಾಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು</strong>: ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಟ್ಟಣ ಪಂಚಾಯಿತಿ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.</p>.<p>ಬೀದಿ ನಾಯಿಗಳನ್ನು ಬೋನುಗಳಲ್ಲಿ ಸೆರೆ ಹಿಡಿಯುತ್ತಿದ್ದಾರೆ.</p>.<p>ಸುತ್ತಲಿನ ಹಳ್ಳಿಗಳಲ್ಲಿದ್ದ ನೂರಾರು ಬೀದಿ ನಾಯಿಗಳು ಪಟ್ಟಣಕ್ಕೆ ಬಂದು ಹಗಲಿರುಳು ಜನರಿಗೆ ತೊಂದರೆ ನೀಡುತ್ತಿದ್ದವು. ವರ್ಷಕ್ಕೆ 2–3 ಬಾರಿ ಸಂತಾನೋತ್ಪತ್ತಿ ಮಾಡುತ್ತಿದ್ದುದರಿಂದ ಬೀದಿ ನಾಯಿಗಳ ಹಾವಳಿ ಅತಿಯಾಗಿತ್ತು. ಜನರು, ವಿದ್ಯಾರ್ಥಿಗಳು, ಮಕ್ಕಳು ಬೀದಿಯಲ್ಲಿ ತಿರುಗಾಡಲು ಭಯಪಡುವಂತಾಗಿತ್ತು.</p>.<p>ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲದೇ ಜಾನುವಾರುಗಳ ಮೇಲೆಯೂ ದಾಳಿ ಮಾಡುತ್ತಿದ್ದವು. ಈಗಾಗಲೇ ಅನೇಕ ಜನರಿಗೆ ಕಚ್ಚಿದ್ದು, ದನ ಕರುಗಳಿಗೂ ಕಚ್ಚಿ ಗಾಯಗೊಳಿಸಿದ್ದವು.</p>.<p>ಶಾಲೆ, ಕಾಲೇಜು, ಬಸ್ನಿಲ್ದಾಣ, ನ್ಯಾಯಾಲಯ, ರೈಲ್ವೆ ಸ್ಟೇಷನ್ ಸೇರಿದಂತೆ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಬೀದಿ ನಾಯಿಗಳು ಇರಬಾರದು ಎಂದು ನ್ಯಾಯಾಲಯ ಆದೇಶ ಮಾಡಿದೆ. ಅದರಂತೆ ಸ್ಥಳೀಯ ಪಟ್ಟಣ ಪಂಚಾಯಿತಿಯಿಂದ ಬೀದಿಗಳಲ್ಲಿ ಅಲೆದಾಡುತ್ತಿದ್ದ ನಾಯಿಗಳನ್ನು ಹಿಡಿದು ಸೊಪ್ಪಿನಹಳ್ಳಿ ಬಳಿ ಬೋನುಗಳಲ್ಲಿ ಬಂಧಿಸಿಡುತ್ತಿದ್ದಾರೆ. ಟೆಂಡರ್ದಾರರು ಈ ನಾಯಿಗಳಿಗೆ ಪ್ರತಿದಿನ ಊಟೋಪಚಾರ ಮಾಡುತ್ತಿದ್ದಾರೆ.</p>.<p>‘ಹಿಡಿದಿರುವ ನಾಯಿಗಳ ಪೈಕಿ ಈಗಾಗಲೇ 30 ನಾಯಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಂತರ ಅವುಗಳ ಆರೈಕೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಕಡಿಮೆಯಾಗುವ ನಿರೀಕ್ಷೆ ಇದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಬೀದಿ ನಾಯಿಗಳ ಉಪಟಳದಿಂದ ಬೇಸತ್ತಿದ್ದ ಜನರು ಇದೀಗ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನಾಯಿಗಳನ್ನು ಹಿಡಿಯುತ್ತಿರುವುದರಿಂದ ಬೀದಿಗಳಲ್ಲಿ ಹಾವಳಿ ಸ್ವಲ್ಪ ಕಡಿಮೆಯಾಗಿದೆ.</p>.<p>55 ನಾಯಿಗಳನ್ನು ಹಿಡಿದು ಕೇಜ್ನಲ್ಲಿ ಇಡಲಾಗಿದ್ದು, ಶಸ್ತ್ರಚಿಕಿತ್ಸೆ ನಂತರ 6-8 ದಿನಗಳ ಕಾಲ ಆರೈಕೆ ಮಾಡಲಾಗುತ್ತದೆ. ನಂತರ ಅವುಗಳನ್ನು ಹಿಡಿದ ಜಾಗಕ್ಕೆ ತಂದು ಬಿಡಲಾಗುವುದು</p><p> <strong>–ಮಂಜುನಾಥ್, ಪ.ಪಂ. ಮುಖ್ಯಾಧಿಕಾರಿ</strong></p>.<p>ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡುತ್ತಿರುವುದು ಉತ್ತಮ ಕೆಲಸ. ಇದರಿಂದ ಬೀದಿ ನಾಯಿ ಹಾವಳಿ ಕಡಿಮೆ ಆಗಲಿದೆ.</p><p> – <strong>ಅಸ್ಲಂ ಪಾಷಾ, ಉಪಾಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>