<p><strong>ಹಾಸನ:</strong> ನಗರದ ಅಂಬೇಡ್ಕರ್ ಭವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ವ್ಯವಸ್ಥಿತ ಮೂಲಭೂತ ಸೌಕರ್ಯ ಒದಗಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.</p>.<p>ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭವನದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.</p>.<p>ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಕೇವಲ ನಿರ್ವಹಣಾ ವೆಚ್ಚ ಭರಿಸಿ, ಖಾಸಗಿ ಕಾರ್ಯಕ್ರಮಗಳಿಗೆ ನಿರ್ವಹಣಾ ವೆಚ್ಚದ ಜೊತೆಗೆ ನಿಗದಿತ ಶುಲ್ಕ ಪಡೆಯಲು ಅವರು ತಿಳಿಸಿದರು.</p>.<p>ಬೇಲೂರು ತಾಲ್ಲೂಕು ನರಸೀಪುರದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದ ಸ್ಥಳವನ್ನು ಇಲಾಖೆ ಅಧಿಕಾರಿಗಳು ಹಾಗೂ ಕೆ.ಆರ್.ಐ.ಡಿ.ಎಲ್ ಎಂಜಿನಿಯರ್ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದರು.</p>.<p>ರಾಜ್ಯ ದಲಿತ ಸಂಘರ್ಷ ಸಮಿತಿಯ ಈರಪ್ಪ ಮಾತನಾಡಿ, ಭವನದಲ್ಲಿ ಮೂಲ ಸೌಕರ್ಯ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಗ್ರಂಥಾಲಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತು ಶುಭ ಸಮಾರಂಭಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.</p>.<p>ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೆಂಕಟರಮಣರೆಡ್ಡಿ, ನಗರಸಭಾ ಆಯುಕ್ತ ಪರಮೇಶ್, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಅಂಬೇಡ್ಕರ್ ಭವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ವ್ಯವಸ್ಥಿತ ಮೂಲಭೂತ ಸೌಕರ್ಯ ಒದಗಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.</p>.<p>ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭವನದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.</p>.<p>ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಕೇವಲ ನಿರ್ವಹಣಾ ವೆಚ್ಚ ಭರಿಸಿ, ಖಾಸಗಿ ಕಾರ್ಯಕ್ರಮಗಳಿಗೆ ನಿರ್ವಹಣಾ ವೆಚ್ಚದ ಜೊತೆಗೆ ನಿಗದಿತ ಶುಲ್ಕ ಪಡೆಯಲು ಅವರು ತಿಳಿಸಿದರು.</p>.<p>ಬೇಲೂರು ತಾಲ್ಲೂಕು ನರಸೀಪುರದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದ ಸ್ಥಳವನ್ನು ಇಲಾಖೆ ಅಧಿಕಾರಿಗಳು ಹಾಗೂ ಕೆ.ಆರ್.ಐ.ಡಿ.ಎಲ್ ಎಂಜಿನಿಯರ್ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದರು.</p>.<p>ರಾಜ್ಯ ದಲಿತ ಸಂಘರ್ಷ ಸಮಿತಿಯ ಈರಪ್ಪ ಮಾತನಾಡಿ, ಭವನದಲ್ಲಿ ಮೂಲ ಸೌಕರ್ಯ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಗ್ರಂಥಾಲಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತು ಶುಭ ಸಮಾರಂಭಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.</p>.<p>ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೆಂಕಟರಮಣರೆಡ್ಡಿ, ನಗರಸಭಾ ಆಯುಕ್ತ ಪರಮೇಶ್, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>