<p><strong>ಹಾಸನ:</strong> ಡಾ.ಅಂಬೇಡ್ಕರ್ ಅವರ ಚಿಂತನೆಗಳನ್ನು ವರ್ಷದ 365 ದಿನವೂ ಅವರನ್ನು ಸ್ಮರಿಸಿದರೂ ಕಡಿಮೆಯೇ ಎಂದು ಸಂಸದ ಶ್ರೇಯಸ್ ಪಟೇಲ್ ಬಣ್ಣಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಸಂವಿಧಾನ, ಸಮಾನತೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹೋರಾಟಗಾರ ಡಾ. ಅಂಬೇಡ್ಕರ್ ನಮ್ಮನ್ನು ಸ್ವತಂತ್ರವಾಗಿ, ಮಾನವೀಯವಾಗಿ ಬದುಕುವ ದಾರಿ ತೋರಿಸಿದರು ಎಂದರು.</p>.<p>ಇಂದಿನ ಸಮಾಜದಲ್ಲಿ ಜನರು ಹಕ್ಕು, ಸ್ವಾತಂತ್ರ್ಯಗಳೊಂದಿಗೆ ನೆಮ್ಮದಿಯಿಂದ ಬದುಕುತ್ತಿರುವುದು, ಅವರ ನೀಡಿದ ಸಂವಿಧಾನದ ಬಲವಾಗಿದೆ. ಸಂವಿಧಾನವನ್ನು ತಿಳಿದು, ತಿಳಿಸುವುದು ಎಲ್ಲರ ಜವಾಬ್ದಾರಿ. ಡಾ.ಅಂಬೇಡ್ಕರ್ ಅವರ ಆದರ್ಶಗಳು ನಮ್ಮನ್ನು ಇನ್ನಷ್ಟು ಪ್ರಗತಿಪರ ಸಮಾಜದತ್ತ ಕರೆದೊಯ್ಯುತ್ತವೆ ಎಂದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಅಂಬೇಡ್ಕರ್ ಇಲ್ಲಿ ಜನಿಸಿದ್ದು, ನಮ್ಮ ದೇಶಕ್ಕೆ ದೊರೆತ ಅಪರೂಪದ ವರ. ನಾವು ಅನುಭವಿಸುವ ಸಮಾನತೆ, ಹಕ್ಕುಗಳು ಅವರ ಕೊಡುಗೆ ಎಂದು ಸ್ಮರಿಸಿದರು.</p>.<p>ಅಂಬೇಡ್ಕರ್ ನೀಡಿದ ಮೌಲ್ಯ, ಸಂವಿಧಾನದ ಜೀವಾಳ ಪ್ರಜಾಪ್ರಭುತ್ವದ ನೆಲೆಯಾಗಿದೆ. ಅವರ ಆದರ್ಶಗಳನ್ನು ಉಳಿಸುವುದು, ಅನುಸರಿಸುವುದು ಮತ್ತು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದಲಿತ ಮುಖಂಡರಾದ ಕೃಷ್ಣದಾಸ್, ಸಂದೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಡಾ.ಅಂಬೇಡ್ಕರ್ ಅವರ ಚಿಂತನೆಗಳನ್ನು ವರ್ಷದ 365 ದಿನವೂ ಅವರನ್ನು ಸ್ಮರಿಸಿದರೂ ಕಡಿಮೆಯೇ ಎಂದು ಸಂಸದ ಶ್ರೇಯಸ್ ಪಟೇಲ್ ಬಣ್ಣಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಸಂವಿಧಾನ, ಸಮಾನತೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹೋರಾಟಗಾರ ಡಾ. ಅಂಬೇಡ್ಕರ್ ನಮ್ಮನ್ನು ಸ್ವತಂತ್ರವಾಗಿ, ಮಾನವೀಯವಾಗಿ ಬದುಕುವ ದಾರಿ ತೋರಿಸಿದರು ಎಂದರು.</p>.<p>ಇಂದಿನ ಸಮಾಜದಲ್ಲಿ ಜನರು ಹಕ್ಕು, ಸ್ವಾತಂತ್ರ್ಯಗಳೊಂದಿಗೆ ನೆಮ್ಮದಿಯಿಂದ ಬದುಕುತ್ತಿರುವುದು, ಅವರ ನೀಡಿದ ಸಂವಿಧಾನದ ಬಲವಾಗಿದೆ. ಸಂವಿಧಾನವನ್ನು ತಿಳಿದು, ತಿಳಿಸುವುದು ಎಲ್ಲರ ಜವಾಬ್ದಾರಿ. ಡಾ.ಅಂಬೇಡ್ಕರ್ ಅವರ ಆದರ್ಶಗಳು ನಮ್ಮನ್ನು ಇನ್ನಷ್ಟು ಪ್ರಗತಿಪರ ಸಮಾಜದತ್ತ ಕರೆದೊಯ್ಯುತ್ತವೆ ಎಂದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಅಂಬೇಡ್ಕರ್ ಇಲ್ಲಿ ಜನಿಸಿದ್ದು, ನಮ್ಮ ದೇಶಕ್ಕೆ ದೊರೆತ ಅಪರೂಪದ ವರ. ನಾವು ಅನುಭವಿಸುವ ಸಮಾನತೆ, ಹಕ್ಕುಗಳು ಅವರ ಕೊಡುಗೆ ಎಂದು ಸ್ಮರಿಸಿದರು.</p>.<p>ಅಂಬೇಡ್ಕರ್ ನೀಡಿದ ಮೌಲ್ಯ, ಸಂವಿಧಾನದ ಜೀವಾಳ ಪ್ರಜಾಪ್ರಭುತ್ವದ ನೆಲೆಯಾಗಿದೆ. ಅವರ ಆದರ್ಶಗಳನ್ನು ಉಳಿಸುವುದು, ಅನುಸರಿಸುವುದು ಮತ್ತು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದಲಿತ ಮುಖಂಡರಾದ ಕೃಷ್ಣದಾಸ್, ಸಂದೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>