<p><strong>ಹಾಸನ: </strong>ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯ ಕನ್ನಡ ಅನುವಾದದಲ್ಲಿನ ದೋಷ ಹಾಗೂ ಕೈ ಬಿಟ್ಟಿರುವ ಸಂಗತಿಗಳನ್ನು ಸೇರಿಸಿ ಪುಸ್ತಕ ಪ್ರಕಟಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಎನ್. ರಮೇಶ್ ಆಗ್ರಹಿಸಿದರು.</p>.<p>ಅಂಬೇಡ್ಕರ್ ಅವರ ಬದುಕು ಮತ್ತು ಬರಹದ ಕೃತಿಗಳನ್ನು ಪುನರ್ ಮುದ್ರಿಸುವ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಅವರ ಸಂದೇಶಗಳು, ಮಾರ್ಗದರ್ಶನ ತಳಮಟ್ಟದ ಪ್ರಜೆಗೂ ಸತ್ಯಮಾರ್ಗದಲ್ಲಿ ತಲುಪಬೇಕಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.</p>.<p>2015ರಲ್ಲಿ ಕನ್ನಡದಲ್ಲಿ ಪ್ರಕಟವಾದ ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಅವರ ಎರಡು ಪ್ರಮುಖ ಕೃತಿಗಳನ್ನೇ ಇಲ್ಲಿ ಹೆಸರಿಸಿಲ್ಲ. ಮೊದಲ ಪತ್ನಿ ರಮಾಬಾಯಿಗಾಗಿ ಅಂಬೇಡ್ಕರ್ಬರೆದ ಕೃತಿಯನ್ನು ಸೇರಿಸಿಲ್ಲ. ಯಾರದೋ ಕಣ್ತಪ್ಪಿನಿಂದ ಆಗಿರುವ ಪ್ರಮಾದವಲ್ಲ. ಉದ್ದೇಶಪೂರ್ವಕವಾಗಿದಯೇ ತಪ್ಪು ಸಂದೇಶ ರವಾನಿಸಲಾಗಿದೆ ಎಂದು ಆರೋಪಿಸಿದರು.</p>.<p>ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಯಚಂದ್ರ ಗುಪ್ತ, ಡಾ. ಶ್ರೀನಿವಾಸ್ಗೌಡ, ಎಚ್.ಎನ್. ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯ ಕನ್ನಡ ಅನುವಾದದಲ್ಲಿನ ದೋಷ ಹಾಗೂ ಕೈ ಬಿಟ್ಟಿರುವ ಸಂಗತಿಗಳನ್ನು ಸೇರಿಸಿ ಪುಸ್ತಕ ಪ್ರಕಟಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಎನ್. ರಮೇಶ್ ಆಗ್ರಹಿಸಿದರು.</p>.<p>ಅಂಬೇಡ್ಕರ್ ಅವರ ಬದುಕು ಮತ್ತು ಬರಹದ ಕೃತಿಗಳನ್ನು ಪುನರ್ ಮುದ್ರಿಸುವ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಅವರ ಸಂದೇಶಗಳು, ಮಾರ್ಗದರ್ಶನ ತಳಮಟ್ಟದ ಪ್ರಜೆಗೂ ಸತ್ಯಮಾರ್ಗದಲ್ಲಿ ತಲುಪಬೇಕಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.</p>.<p>2015ರಲ್ಲಿ ಕನ್ನಡದಲ್ಲಿ ಪ್ರಕಟವಾದ ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಅವರ ಎರಡು ಪ್ರಮುಖ ಕೃತಿಗಳನ್ನೇ ಇಲ್ಲಿ ಹೆಸರಿಸಿಲ್ಲ. ಮೊದಲ ಪತ್ನಿ ರಮಾಬಾಯಿಗಾಗಿ ಅಂಬೇಡ್ಕರ್ಬರೆದ ಕೃತಿಯನ್ನು ಸೇರಿಸಿಲ್ಲ. ಯಾರದೋ ಕಣ್ತಪ್ಪಿನಿಂದ ಆಗಿರುವ ಪ್ರಮಾದವಲ್ಲ. ಉದ್ದೇಶಪೂರ್ವಕವಾಗಿದಯೇ ತಪ್ಪು ಸಂದೇಶ ರವಾನಿಸಲಾಗಿದೆ ಎಂದು ಆರೋಪಿಸಿದರು.</p>.<p>ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಯಚಂದ್ರ ಗುಪ್ತ, ಡಾ. ಶ್ರೀನಿವಾಸ್ಗೌಡ, ಎಚ್.ಎನ್. ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>