ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಕೃತಿ ಕನ್ನಡ ಅನುವಾದ ಲೋಪ ಸರಿಪಡಿಸಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಆಗ್ರಹ
Last Updated 6 ನವೆಂಬರ್ 2020, 12:18 IST
ಅಕ್ಷರ ಗಾತ್ರ

ಹಾಸನ: ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯ ಕನ್ನಡ ಅನುವಾದದಲ್ಲಿನ ದೋಷ ಹಾಗೂ ಕೈ ಬಿಟ್ಟಿರುವ ಸಂಗತಿಗಳನ್ನು ಸೇರಿಸಿ ಪುಸ್ತಕ ಪ್ರಕಟಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಎನ್. ರಮೇಶ್ ಆಗ್ರಹಿಸಿದರು.

ಅಂಬೇಡ್ಕರ್ ಅವರ ಬದುಕು ಮತ್ತು ಬರಹದ ಕೃತಿಗಳನ್ನು ಪುನರ್ ಮುದ್ರಿಸುವ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಅವರ ಸಂದೇಶಗಳು, ಮಾರ್ಗದರ್ಶನ ತಳಮಟ್ಟದ ಪ್ರಜೆಗೂ ಸತ್ಯಮಾರ್ಗದಲ್ಲಿ ತಲುಪಬೇಕಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

2015ರಲ್ಲಿ ಕನ್ನಡದಲ್ಲಿ ಪ್ರಕಟವಾದ ಅಂಬೇಡ್ಕರ್ ಅವರ ಬದುಕು-ಬರಹಗಳು ಕೃತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಅವರ ಎರಡು ಪ್ರಮುಖ ಕೃತಿಗಳನ್ನೇ ಇಲ್ಲಿ ಹೆಸರಿಸಿಲ್ಲ. ಮೊದಲ ಪತ್ನಿ ರಮಾಬಾಯಿಗಾಗಿ ಅಂಬೇಡ್ಕರ್ಬರೆದ ಕೃತಿಯನ್ನು ಸೇರಿಸಿಲ್ಲ. ಯಾರದೋ ಕಣ್ತಪ್ಪಿನಿಂದ ಆಗಿರುವ ಪ್ರಮಾದವಲ್ಲ. ಉದ್ದೇಶಪೂರ್ವಕವಾಗಿದಯೇ ತಪ್ಪು ಸಂದೇಶ ರವಾನಿಸಲಾಗಿದೆ ಎಂದು ಆರೋಪಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಯಚಂದ್ರ ಗುಪ್ತ, ಡಾ. ಶ್ರೀನಿವಾಸ್‍ಗೌಡ, ಎಚ್.ಎನ್. ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT