<p>ಆಲೂರು: ‘ಆಂಬುಲೆನ್ಸ್ಗಳಲ್ಲಿ ಅಗತ್ಯವಿರುವ ತುರ್ತು ಔಷಧಗಳನ್ನು ಜಾಗ್ರತೆಯಿಂದ ಸಂಗ್ರಹಿಸಿ ತಕ್ಷಣಕ್ಕೆ ಕೈಗೆ ಪಡೆದು ಉಪಚರಿಸುವಂತಿರಬೇಕು. ಕರ್ತವ್ಯಕ್ಕೆ ಸದಾ ಸಿದ್ಧರಿರಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಿಸಾರ್ ಫಾತಿಮ ಅವರು ದಾದಿಯರು ಮತ್ತು ಚಾಲಕರಿಗೆ ಸೂಚನೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿರುವ ಮೂರು ಆಂಬುಲೆನ್ಸ್ಗಳಲ್ಲಿ ದಾಸ್ತಾನು ಮಾಡಿರುವ ಜೀವರಕ್ಷಕ ಔಷಧಿ ಇನ್ನಿತರ ಅಗತ್ಯ ಸಲಕರಣೆಗಳನ್ನು ಪರಿಶೀಲಿಸಿದರು.</p>.<p>ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಂಬುಲೆನ್ಸ್ನಲ್ಲಿ ಯಾವಾಗಲೂ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ರವಾನಿಸಬೇಕಾಗುತ್ತದೆ. ಗರ್ಭಿಣಿಯರು, ತಾಯಂದಿರು, ಮಕ್ಕಳು ಇನ್ನಿತರ ರೋಗಿಗಳನ್ನು ರವಾನಿಸುವ ಸಂದರ್ಭದಲ್ಲಿ ರಕ್ತಸ್ರಾವವಾದರೆ, ಕೂಡಲೆ ಚಿಕಿತ್ಸೆ ನೀಡಬೇಕಾಗುತ್ತದೆ. ಈ ಕಾರಣದಿಂದ ತುರ್ತಾಗಿ ಮತ್ತೊಂದು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ತುರ್ತು ಜೀವರಕ್ಷಕ ಔಷಧಿಗಳು, ಆಕ್ಸಿಜನ್, ಶುಚಿಯಾಗಿರುವ ಹಾಸಿಗೆ, ಬೆಡ್ಶೀಟ್ ಸೇರಿದಂತೆ ಹಲವು ಉಪಕರಣಗಳನ್ನು ಇರಿಸಲಾಗುವುದು’ ಎಂದರು.</p>.<p>‘ದಿನದ 24 ಗಂಟೆಯೂ ಚಾಲಕ, ದಾದಿಯರು ಸದಾ ಸಿದ್ಧರಿರುತ್ತಾರೆ. ರೋಗಿ ಪರಿಸ್ಥಿತಿ ಬಿಗಡಾಯಿಸಿದಾಗ ಅಗತ್ಯವೆನಿಸಿದರೆ ರೋಗಿ ಜೊತೆ ಮತ್ತೊಬ್ಬ ದಾದಿಯನ್ನು ಕಳುಹಿಸಿಕೊಡಲಾಗುವುದು. ಸದ್ಯ ಆಸ್ಪತ್ರೆಯಲ್ಲಿ ಮೂರು ಆಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ಗಳಿಗೆಯಲ್ಲಿ ಸೇವೆಗೆ ಸಿದ್ಧವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ‘ಆಂಬುಲೆನ್ಸ್ಗಳಲ್ಲಿ ಅಗತ್ಯವಿರುವ ತುರ್ತು ಔಷಧಗಳನ್ನು ಜಾಗ್ರತೆಯಿಂದ ಸಂಗ್ರಹಿಸಿ ತಕ್ಷಣಕ್ಕೆ ಕೈಗೆ ಪಡೆದು ಉಪಚರಿಸುವಂತಿರಬೇಕು. ಕರ್ತವ್ಯಕ್ಕೆ ಸದಾ ಸಿದ್ಧರಿರಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಿಸಾರ್ ಫಾತಿಮ ಅವರು ದಾದಿಯರು ಮತ್ತು ಚಾಲಕರಿಗೆ ಸೂಚನೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿರುವ ಮೂರು ಆಂಬುಲೆನ್ಸ್ಗಳಲ್ಲಿ ದಾಸ್ತಾನು ಮಾಡಿರುವ ಜೀವರಕ್ಷಕ ಔಷಧಿ ಇನ್ನಿತರ ಅಗತ್ಯ ಸಲಕರಣೆಗಳನ್ನು ಪರಿಶೀಲಿಸಿದರು.</p>.<p>ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಂಬುಲೆನ್ಸ್ನಲ್ಲಿ ಯಾವಾಗಲೂ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ರವಾನಿಸಬೇಕಾಗುತ್ತದೆ. ಗರ್ಭಿಣಿಯರು, ತಾಯಂದಿರು, ಮಕ್ಕಳು ಇನ್ನಿತರ ರೋಗಿಗಳನ್ನು ರವಾನಿಸುವ ಸಂದರ್ಭದಲ್ಲಿ ರಕ್ತಸ್ರಾವವಾದರೆ, ಕೂಡಲೆ ಚಿಕಿತ್ಸೆ ನೀಡಬೇಕಾಗುತ್ತದೆ. ಈ ಕಾರಣದಿಂದ ತುರ್ತಾಗಿ ಮತ್ತೊಂದು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ತುರ್ತು ಜೀವರಕ್ಷಕ ಔಷಧಿಗಳು, ಆಕ್ಸಿಜನ್, ಶುಚಿಯಾಗಿರುವ ಹಾಸಿಗೆ, ಬೆಡ್ಶೀಟ್ ಸೇರಿದಂತೆ ಹಲವು ಉಪಕರಣಗಳನ್ನು ಇರಿಸಲಾಗುವುದು’ ಎಂದರು.</p>.<p>‘ದಿನದ 24 ಗಂಟೆಯೂ ಚಾಲಕ, ದಾದಿಯರು ಸದಾ ಸಿದ್ಧರಿರುತ್ತಾರೆ. ರೋಗಿ ಪರಿಸ್ಥಿತಿ ಬಿಗಡಾಯಿಸಿದಾಗ ಅಗತ್ಯವೆನಿಸಿದರೆ ರೋಗಿ ಜೊತೆ ಮತ್ತೊಬ್ಬ ದಾದಿಯನ್ನು ಕಳುಹಿಸಿಕೊಡಲಾಗುವುದು. ಸದ್ಯ ಆಸ್ಪತ್ರೆಯಲ್ಲಿ ಮೂರು ಆಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ಗಳಿಗೆಯಲ್ಲಿ ಸೇವೆಗೆ ಸಿದ್ಧವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>