<p><strong>ಬೇಲೂರು: </strong>ಚಾಲಕನ ನಿಯಂತ್ರಣ ತಪ್ಪಿದ್ದ ಆಂಬುಲೆನ್ಸ್ ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ 5.30ರ ಸುಮಾರಿಗೆ ರಸ್ತೆ ಪಕ್ಕದಲ್ಲಿದ್ದ ಬೈಕ್ ಹಾಗೂ ಮನೆಗೆ ಗುದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.</p>.<p>ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 18 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಚಿಕ್ಕಮಗಳೂರಿನಿಂದ ಹಾಸನಕ್ಕೆ 108 ಆಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಇಲ್ಲಿಯ ನೆಹರು ನಗರದಲ್ಲಿ ರಸ್ತೆಯಲ್ಲಿ ಚಾಲಕನಿಗೆ ಮೂರ್ಛೆರೋಗ ಬಂದಿದೆ. ಈ ಸಂಧರ್ಭ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ವಾಹನ ರಸ್ತೆ ಪಕ್ಕದಲ್ಲಿದ್ದ ಬೈಕ್, ಮನೆಗೆ ಗುದ್ದಿ ನಿಂತಿದೆ.</p>.<p>ಆಂಬುಲೆನ್ಸ್ ಗುದ್ದಿದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದ್ದು, ಮನೆಯ ಮುಂಭಾಗಕ್ಕೆ ಹಾನಿಯಾಗಿದೆ. ಆದರೆ ಆಂಬುಲೆನ್ಸ್ನಲ್ಲಿದ್ದ ಚಾಲಕ ಹಾಗೂ ಮಗೂ ಮತ್ತು ಪೋಷಕರಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಗು ಮತ್ತು ಪೋಷಕರನ್ನು ಬೇರೊಂದು ಆಂಬುಲೆನ್ಸ್ನಲ್ಲಿ ಹಾಸನಕ್ಕೆ ಕಳುಹಿಸಿ ಕೊಟ್ಟರು.</p>.<p>ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>ಚಾಲಕನ ನಿಯಂತ್ರಣ ತಪ್ಪಿದ್ದ ಆಂಬುಲೆನ್ಸ್ ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ 5.30ರ ಸುಮಾರಿಗೆ ರಸ್ತೆ ಪಕ್ಕದಲ್ಲಿದ್ದ ಬೈಕ್ ಹಾಗೂ ಮನೆಗೆ ಗುದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.</p>.<p>ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 18 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಚಿಕ್ಕಮಗಳೂರಿನಿಂದ ಹಾಸನಕ್ಕೆ 108 ಆಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಇಲ್ಲಿಯ ನೆಹರು ನಗರದಲ್ಲಿ ರಸ್ತೆಯಲ್ಲಿ ಚಾಲಕನಿಗೆ ಮೂರ್ಛೆರೋಗ ಬಂದಿದೆ. ಈ ಸಂಧರ್ಭ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ವಾಹನ ರಸ್ತೆ ಪಕ್ಕದಲ್ಲಿದ್ದ ಬೈಕ್, ಮನೆಗೆ ಗುದ್ದಿ ನಿಂತಿದೆ.</p>.<p>ಆಂಬುಲೆನ್ಸ್ ಗುದ್ದಿದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದ್ದು, ಮನೆಯ ಮುಂಭಾಗಕ್ಕೆ ಹಾನಿಯಾಗಿದೆ. ಆದರೆ ಆಂಬುಲೆನ್ಸ್ನಲ್ಲಿದ್ದ ಚಾಲಕ ಹಾಗೂ ಮಗೂ ಮತ್ತು ಪೋಷಕರಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಗು ಮತ್ತು ಪೋಷಕರನ್ನು ಬೇರೊಂದು ಆಂಬುಲೆನ್ಸ್ನಲ್ಲಿ ಹಾಸನಕ್ಕೆ ಕಳುಹಿಸಿ ಕೊಟ್ಟರು.</p>.<p>ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>