<p><strong>ಹೊಳೆನರಸೀಪುರ:</strong> ‘ಕಳೆದ 4 ವರ್ಷಗಳ ಹಿಂದೆ ನಮಗೆ ನೀಡಿರುವ ಮೊಬೈಲ್ನಲ್ಲಿ ಈಗ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕಡಿಮೆ ರ್ಯಾಮ್, ಕಡಿಮೆ ಜಿಬಿಗಳಿರುವ ಮೊಬೈಲ್ ನೀಡಿದ್ದಾರೆ. ಇವುಗಳಲ್ಲಿ ನಮ್ಮ ಇಲಾಖೆ ಕೆಲಸದ ಡೇಟಾ ನಮೂದಿಸಲು ಸಾಧ್ಯವೇ ಇಲ್ಲ’ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಶೈಲಜಾ ತಿಳಿಸಿದರು.</p>.<p>ಸೋಮವಾರ ತಾಲ್ಲೂಕು ಸಿಡಿಪಿಓ ಕಚೇರಿ ಮುಂದೆ ಮೊಬೈಲ್ ಹಿಂದಿರುಗಿಸಲು ಪ್ರತಿಭಟನೆ ನಡೆಸುವ ವೇಳೆ ಮಾತನಾಡಿ, ಹೊಸ ಮೊಬೈಲ್ ನೀಡದಿದ್ದರೆ ಈ ಮೊಬೈಲ್ಗಳನ್ನು ನಾಳೆಯಿಂದ ಬಳಸುವುದಿಲ್ಲ, ಬಳಸಲೂ ಸಾಧ್ಯವೂ ಇಲ್ಲ’ ಎಂದರು.</p>.<p>‘ಈ ಮೊಬೈಲ್ಗಳನ್ನು ಬದಲಿಸಿ ಹೆಚ್ಚು ಕೆಲಸ ಮಾಡಿದರೂ ಹ್ಯಾಂಗ್ ಆಗದ, ಹೆಚ್ಚು ಸ್ಟೋರೇಜ್ಗೆ ಅವಕಾಶ ಇರುವ ಮೊಬೈಲ್ಗಳನ್ನು ನೀಡಿ ಎಂದು ಕಳೆದ ಒಂದು ವರ್ಷದಿಂದ ಆಗ್ರಹಿಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸದ ಕಾರಣ ಇಂದು ಅನಿವಾರ್ಯವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಿಡಿಪಿಓ ಭಾಗ್ಯಮ್ಮ,‘ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 4 ವರ್ಷಗಳ ಹಿಂದೆ ಮೊಬೈಲ್ ನೀಡಿತ್ತು. ಆದ್ದರಿಂದ ಹೊಸ ಮೊಬೈಲ್ ನೀಡಿ ಎಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ ಹೊಸ ಮೊಬೈಲ್ ನೀಡಿದರೆ ನಾವೂ ನೀಡುತ್ತೇವೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದರು.</p>.<p>ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಭಾಗ್ಯಮ್ಮ ಅವರಿಗೆ ಮೊಬೈಲ್ ಹಿಂದಿರುಗಿಸಲು ಹೋದಾಗ ಅವರು ತೆಗೆದುಕೊಳ್ಳಲು ನಿರಾಕರಿಸಿದರು.</p>.<p>ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವೀಣಾ, ಕಾರ್ಯದರ್ಶಿ ಶೈಲಜಾ, ಖಜಾಂಚಿ ಗೀತಾ, ಉದ್ದೂರು ಅಂಬಿಕಾ, ಶ್ರುತಿ, ಶೋಭಾರಾಣಿ, ಸಿದ್ದಿಕಾ, ಯಶೋಧ. ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ‘ಕಳೆದ 4 ವರ್ಷಗಳ ಹಿಂದೆ ನಮಗೆ ನೀಡಿರುವ ಮೊಬೈಲ್ನಲ್ಲಿ ಈಗ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕಡಿಮೆ ರ್ಯಾಮ್, ಕಡಿಮೆ ಜಿಬಿಗಳಿರುವ ಮೊಬೈಲ್ ನೀಡಿದ್ದಾರೆ. ಇವುಗಳಲ್ಲಿ ನಮ್ಮ ಇಲಾಖೆ ಕೆಲಸದ ಡೇಟಾ ನಮೂದಿಸಲು ಸಾಧ್ಯವೇ ಇಲ್ಲ’ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಶೈಲಜಾ ತಿಳಿಸಿದರು.</p>.<p>ಸೋಮವಾರ ತಾಲ್ಲೂಕು ಸಿಡಿಪಿಓ ಕಚೇರಿ ಮುಂದೆ ಮೊಬೈಲ್ ಹಿಂದಿರುಗಿಸಲು ಪ್ರತಿಭಟನೆ ನಡೆಸುವ ವೇಳೆ ಮಾತನಾಡಿ, ಹೊಸ ಮೊಬೈಲ್ ನೀಡದಿದ್ದರೆ ಈ ಮೊಬೈಲ್ಗಳನ್ನು ನಾಳೆಯಿಂದ ಬಳಸುವುದಿಲ್ಲ, ಬಳಸಲೂ ಸಾಧ್ಯವೂ ಇಲ್ಲ’ ಎಂದರು.</p>.<p>‘ಈ ಮೊಬೈಲ್ಗಳನ್ನು ಬದಲಿಸಿ ಹೆಚ್ಚು ಕೆಲಸ ಮಾಡಿದರೂ ಹ್ಯಾಂಗ್ ಆಗದ, ಹೆಚ್ಚು ಸ್ಟೋರೇಜ್ಗೆ ಅವಕಾಶ ಇರುವ ಮೊಬೈಲ್ಗಳನ್ನು ನೀಡಿ ಎಂದು ಕಳೆದ ಒಂದು ವರ್ಷದಿಂದ ಆಗ್ರಹಿಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸದ ಕಾರಣ ಇಂದು ಅನಿವಾರ್ಯವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಿಡಿಪಿಓ ಭಾಗ್ಯಮ್ಮ,‘ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 4 ವರ್ಷಗಳ ಹಿಂದೆ ಮೊಬೈಲ್ ನೀಡಿತ್ತು. ಆದ್ದರಿಂದ ಹೊಸ ಮೊಬೈಲ್ ನೀಡಿ ಎಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ ಹೊಸ ಮೊಬೈಲ್ ನೀಡಿದರೆ ನಾವೂ ನೀಡುತ್ತೇವೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದರು.</p>.<p>ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಭಾಗ್ಯಮ್ಮ ಅವರಿಗೆ ಮೊಬೈಲ್ ಹಿಂದಿರುಗಿಸಲು ಹೋದಾಗ ಅವರು ತೆಗೆದುಕೊಳ್ಳಲು ನಿರಾಕರಿಸಿದರು.</p>.<p>ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವೀಣಾ, ಕಾರ್ಯದರ್ಶಿ ಶೈಲಜಾ, ಖಜಾಂಚಿ ಗೀತಾ, ಉದ್ದೂರು ಅಂಬಿಕಾ, ಶ್ರುತಿ, ಶೋಭಾರಾಣಿ, ಸಿದ್ದಿಕಾ, ಯಶೋಧ. ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>