<p><strong>ಹಿರೀಸಾವೆ:</strong> ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಿರೀಸಾವೆ ಹೋಬಳಿಯಿಂದ ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ತಂಡೋಪತಂಡವಾಗಿ ಸೋಮವಾರ ಬೆಳಿಗ್ಗೆ ಇಲ್ಲಿಂದ ಬೆಂಗಳೂರು ಕಡೆಗೆ ಪ್ರಯಾಣಿಸಿದರು.</p>.<p>ಬೆಳಿಗ್ಗೆ 6 ಗಂಟೆಯಿಂದ ಬಸ್ ನಿಲ್ದಾಣದ ತುಂಬ ಅಂಗನವಾಡಿ ಕಾರ್ಯಕರ್ತೆಯರೇ ಇದ್ದು, ಮೂರು ದಿನ ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದರು. ಬಟ್ಟೆ, ಹೊದಿಕೆ ಸೇರಿದಂತೆ ನಿತ್ಯ ಬಳಕೆ ವಸ್ತುಗಳನ್ನು ಬ್ಯಾಗ್ನಲ್ಲಿ ತುಂಬಿಕೊಂಡು, ತಮ್ಮ ಪುಟ್ಟ ಮಕ್ಕಳನ್ನು ಜೊತೆಯಲ್ಲಿ ಎತ್ತಿಕೊಂಡು ಬಸ್ ಹತ್ತಿದರು.</p>.<p>ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಬರುವ ಬಹುತೇಕ ಬಸ್ಗಳು ಪ್ರಯಾಣಿಕರಿಂದ ತುಂಬಿದ್ದರಿಂದ ಗಂಟೆಗಟ್ಟಲೆ ನಿಲ್ದಾಣದಲ್ಲಿ ಕೆಲವರು ಕಾಯ್ದುಕೊಂಡು, ಅಲ್ಲಿಯೇ ತಿಂಡಿ ತಿಂದರು. ಇನ್ನೂ ಕೆಲವರು ನಿಂತುಕೊಂಡೆ ಪ್ರಯಾಣ ಬೆಳೆಸಿದರು.</p>.<p>‘ಅಂಗನವಾಡಿ ಕೇಂದ್ರಗಳು ಮೂರು ದಿನ ತೆರೆಯುವುದಿಲ್ಲ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ಅಲ್ಲಿಯೇ ಉಳಿಯಲು ಸಿದ್ದರಾಗಿ ಹೋಗುತ್ತಿದ್ದೇವೆ’ ಎಂದು ಅಂಗನವಾಡಿ ಶಿಕ್ಷಕಿ ಹೇಮಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಬೆಂಗಳೂರು ಕಡೆಗೆ ಹೆಚ್ಚು ಜನರು ಪ್ರಯಾಣ ಮಾಡುತ್ತಾರೆ. ಜೊತೆಗೆ ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಪ್ರತಿಭಟನೆಗೆ ತೆರಳುತ್ತಿದ್ದುದರಿಂದ ನಿತ್ಯ ಪ್ರಯಾಣಿಸುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ:</strong> ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಿರೀಸಾವೆ ಹೋಬಳಿಯಿಂದ ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ತಂಡೋಪತಂಡವಾಗಿ ಸೋಮವಾರ ಬೆಳಿಗ್ಗೆ ಇಲ್ಲಿಂದ ಬೆಂಗಳೂರು ಕಡೆಗೆ ಪ್ರಯಾಣಿಸಿದರು.</p>.<p>ಬೆಳಿಗ್ಗೆ 6 ಗಂಟೆಯಿಂದ ಬಸ್ ನಿಲ್ದಾಣದ ತುಂಬ ಅಂಗನವಾಡಿ ಕಾರ್ಯಕರ್ತೆಯರೇ ಇದ್ದು, ಮೂರು ದಿನ ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದರು. ಬಟ್ಟೆ, ಹೊದಿಕೆ ಸೇರಿದಂತೆ ನಿತ್ಯ ಬಳಕೆ ವಸ್ತುಗಳನ್ನು ಬ್ಯಾಗ್ನಲ್ಲಿ ತುಂಬಿಕೊಂಡು, ತಮ್ಮ ಪುಟ್ಟ ಮಕ್ಕಳನ್ನು ಜೊತೆಯಲ್ಲಿ ಎತ್ತಿಕೊಂಡು ಬಸ್ ಹತ್ತಿದರು.</p>.<p>ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಬರುವ ಬಹುತೇಕ ಬಸ್ಗಳು ಪ್ರಯಾಣಿಕರಿಂದ ತುಂಬಿದ್ದರಿಂದ ಗಂಟೆಗಟ್ಟಲೆ ನಿಲ್ದಾಣದಲ್ಲಿ ಕೆಲವರು ಕಾಯ್ದುಕೊಂಡು, ಅಲ್ಲಿಯೇ ತಿಂಡಿ ತಿಂದರು. ಇನ್ನೂ ಕೆಲವರು ನಿಂತುಕೊಂಡೆ ಪ್ರಯಾಣ ಬೆಳೆಸಿದರು.</p>.<p>‘ಅಂಗನವಾಡಿ ಕೇಂದ್ರಗಳು ಮೂರು ದಿನ ತೆರೆಯುವುದಿಲ್ಲ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ಅಲ್ಲಿಯೇ ಉಳಿಯಲು ಸಿದ್ದರಾಗಿ ಹೋಗುತ್ತಿದ್ದೇವೆ’ ಎಂದು ಅಂಗನವಾಡಿ ಶಿಕ್ಷಕಿ ಹೇಮಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಬೆಂಗಳೂರು ಕಡೆಗೆ ಹೆಚ್ಚು ಜನರು ಪ್ರಯಾಣ ಮಾಡುತ್ತಾರೆ. ಜೊತೆಗೆ ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಪ್ರತಿಭಟನೆಗೆ ತೆರಳುತ್ತಿದ್ದುದರಿಂದ ನಿತ್ಯ ಪ್ರಯಾಣಿಸುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>