ಶ್ರೀಧರ್ಗೌಡ ಎದ್ದು ನಿಂತು, ಸುಮ್ಮನಾಗುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರೂ, ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸುವುದನ್ನು ಮುಂದುವರಿಸಿದರು. ಅದರಿಂದ ಮತ್ತಷ್ಟು ಆಕ್ರೋಶಗೊಂಡ ರಾಜಣ್ಣ, ‘ಕೆಲ ಕಾಂಗ್ರೆಸ್ ಕಾರ್ಯಕರ್ತರು ಬಾಡಿಗೆ ಗಿರಾಕಿಗಳು’ ಎಂದರು. ಅದಕ್ಕೆ ಪ್ರತಿಯಾಗಿ ಕಾರ್ಯಕರ್ತರ ವಿರೋಧವೂ ಹೆಚ್ಚಿತು.