<p><strong>ಸಕಲೇಶಪುರ:</strong> ತಾಲ್ಲೂಕಿನ ದೋಣಿಗಾಲ್ ಸಮೀಪದ ದೊಡ್ಡತಪ್ಪಲೆ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಮಣ್ಣು ಕುಸಿದು 3 ಗಂಟೆ ಸಂಚಾರ ಸ್ಥಗಿತವಾಗಿತ್ತು.</p>.<p>ಗುಡ್ಡ ಕುಸಿತದಿಂದ ಯಾರಿಗೂ ತೊಂದರೆ ಆಗಿಲ್ಲ. ಆದರೆ, ಮಣ್ಣು ಹಾಗೂ ಮರಗಳು ಹೆದ್ದಾರಿಯ ಮೇಲೆ ಅಡ್ಡಲಾಗಿ ಬಿದ್ದಿದ್ದರಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾವಿರಾರು ಮಂದಿ ಪ್ರಯಾಣಿಕರು ಗಂಟೆಗಟ್ಟಲೆ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿಕೊಂಡು ಕಾಯಬೇಕಾಯಿತು.</p>.<p>ಪೊಲೀಸರು ಸ್ಥಳಕ್ಕೆ ಬಂದು, ಚತುಷ್ಪಥ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ಕಂಪನಿಯ ಯಂತ್ರಗಳನ್ನು ತರಿಸಿ, ಮಣ್ಣು ಹಾಗೂ ಮರಗಳನ್ನು ತೆರವು ಮಾಡಿದರು. ಬೆಳಿಗ್ಗೆ 4.50ರ ಸುಮಾರಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>‘ಹೆದ್ದಾರಿಯ ಎರಡು ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳ ಮೇಲೆ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಭೀತಿಯಲ್ಲಿಯೇ ಚಾಲಕರು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದರು’ ಎಂದು ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಅಂಬುಲೆನ್ಸ್ ಚಾಲಕ ಖಾದರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ:</strong> ತಾಲ್ಲೂಕಿನ ದೋಣಿಗಾಲ್ ಸಮೀಪದ ದೊಡ್ಡತಪ್ಪಲೆ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಮಣ್ಣು ಕುಸಿದು 3 ಗಂಟೆ ಸಂಚಾರ ಸ್ಥಗಿತವಾಗಿತ್ತು.</p>.<p>ಗುಡ್ಡ ಕುಸಿತದಿಂದ ಯಾರಿಗೂ ತೊಂದರೆ ಆಗಿಲ್ಲ. ಆದರೆ, ಮಣ್ಣು ಹಾಗೂ ಮರಗಳು ಹೆದ್ದಾರಿಯ ಮೇಲೆ ಅಡ್ಡಲಾಗಿ ಬಿದ್ದಿದ್ದರಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾವಿರಾರು ಮಂದಿ ಪ್ರಯಾಣಿಕರು ಗಂಟೆಗಟ್ಟಲೆ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿಕೊಂಡು ಕಾಯಬೇಕಾಯಿತು.</p>.<p>ಪೊಲೀಸರು ಸ್ಥಳಕ್ಕೆ ಬಂದು, ಚತುಷ್ಪಥ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ಕಂಪನಿಯ ಯಂತ್ರಗಳನ್ನು ತರಿಸಿ, ಮಣ್ಣು ಹಾಗೂ ಮರಗಳನ್ನು ತೆರವು ಮಾಡಿದರು. ಬೆಳಿಗ್ಗೆ 4.50ರ ಸುಮಾರಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>‘ಹೆದ್ದಾರಿಯ ಎರಡು ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳ ಮೇಲೆ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಭೀತಿಯಲ್ಲಿಯೇ ಚಾಲಕರು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದರು’ ಎಂದು ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಅಂಬುಲೆನ್ಸ್ ಚಾಲಕ ಖಾದರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>