<p><strong>ಹಾಸನ:</strong> ‘ಜಿಲ್ಲೆಯ ಅರಕಲಗೂಡು ಕ್ರೀಡಾಂಗಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 30ರಂದು ಬೆಳಿಗ್ಗೆ 11ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ತಿಳಿಸಿದರು.</p>.<p>‘ಕಾರ್ಯಕ್ರಮಕ್ಕೆ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ರಾಜ್ ಯಶವಂತ್ ಅಂಬೇಡ್ಕರ್ ಆಗಮಿಸಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಜಿಲ್ಲೆಯ ದಲಿತ ಸಮುದಾಯಕ್ಕೆ ರಾಜಕೀಯ ಹಾಗೂ ಸಾಮಾಜಿಕ ಅವಕಾಶಗಳು ಸಮಾನವಾಗಿ ದೊರಕಬೇಕು. ಒಳಮೀಸಲಾತಿ ವಿಚಾರದಲ್ಲಿ ಎಡ–ಬಲ ಸಮುದಾಯಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>‘ನಿವೃತ್ತ ಮುಖ್ಯ ಶಿಕ್ಷಕ ಜವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ದಲಿತ ಸಂಘಟನೆಗಳ ಮುಖಂಡರು, ಸರ್ಕಾರಿ ನೌಕರರು, ವಕೀಲರು, ಸಾಹಿತಿಗಳು ಹಾಗೂ ಸಾಮಾಜಿಕ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ಬಿ.ಸಿ. ರಾಜೇಶ್, ಸೋಮಶೇಖರ್, ಜವರಯ್ಯ, ಲಿಂಗರಾಜು, ಗಣೇಶ್ ವೇಲಾಪುರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-793555115</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಜಿಲ್ಲೆಯ ಅರಕಲಗೂಡು ಕ್ರೀಡಾಂಗಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 30ರಂದು ಬೆಳಿಗ್ಗೆ 11ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ತಿಳಿಸಿದರು.</p>.<p>‘ಕಾರ್ಯಕ್ರಮಕ್ಕೆ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ರಾಜ್ ಯಶವಂತ್ ಅಂಬೇಡ್ಕರ್ ಆಗಮಿಸಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಜಿಲ್ಲೆಯ ದಲಿತ ಸಮುದಾಯಕ್ಕೆ ರಾಜಕೀಯ ಹಾಗೂ ಸಾಮಾಜಿಕ ಅವಕಾಶಗಳು ಸಮಾನವಾಗಿ ದೊರಕಬೇಕು. ಒಳಮೀಸಲಾತಿ ವಿಚಾರದಲ್ಲಿ ಎಡ–ಬಲ ಸಮುದಾಯಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>‘ನಿವೃತ್ತ ಮುಖ್ಯ ಶಿಕ್ಷಕ ಜವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ದಲಿತ ಸಂಘಟನೆಗಳ ಮುಖಂಡರು, ಸರ್ಕಾರಿ ನೌಕರರು, ವಕೀಲರು, ಸಾಹಿತಿಗಳು ಹಾಗೂ ಸಾಮಾಜಿಕ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ಬಿ.ಸಿ. ರಾಜೇಶ್, ಸೋಮಶೇಖರ್, ಜವರಯ್ಯ, ಲಿಂಗರಾಜು, ಗಣೇಶ್ ವೇಲಾಪುರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-793555115</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>