<p><strong>ಅರಕಲಗೂಡು:</strong> ತಾಲ್ಲೂಕಿನ ಯಗಟಿ ದಾಖ್ಲೆ ಮಂಡಿಚಿಕ್ಕನ ಕೊಪ್ಪಲು ಗ್ರಾಮದ ರೈತ ಬೀರೇಗೌಡ (65) ನೇಣು ಬಿಗಿದು ಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರು ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆ ಬೆಳೆಯಲು ಯಗಟಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 70 ಸಾವಿರ, ಜೋಡಿಗುಬ್ಬಿ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ₹ 1.70 ಲಕ್ಷ ಹಾಗೂ ಕೈಸಾಲವನ್ನೂ ಮಾಡಿದ್ದರು. ಮನೆ ಕಟ್ಟುವ ಸಲುವಾಗಿ ಚೆನ್ನರಾಯ ಪಟ್ಟಣದ ಸೂರ್ಯೋದಯ ಪೈನಾನ್ಸ್ ಕಂಪನಿಯಿಂದ ₹ 5.20 ಲಕ್ಷ ಸಾಲ ಪಡೆದಿದ್ದರು. ಸಾಲದ ಕಂತು ಪಾವತಿಸದ ಕಾರಣಕ್ಕೆ ಫೈನಾನ್ಸ್ ಕಂಪನಿಯವರು ಮನೆಗೆ ಬೀಗ ಹಾಕಿದ್ದರು. ಇದರಿಂದ ನೊಂದು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರು ಅರಕಲಗೂಡು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-36-2093739639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು:</strong> ತಾಲ್ಲೂಕಿನ ಯಗಟಿ ದಾಖ್ಲೆ ಮಂಡಿಚಿಕ್ಕನ ಕೊಪ್ಪಲು ಗ್ರಾಮದ ರೈತ ಬೀರೇಗೌಡ (65) ನೇಣು ಬಿಗಿದು ಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರು ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆ ಬೆಳೆಯಲು ಯಗಟಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 70 ಸಾವಿರ, ಜೋಡಿಗುಬ್ಬಿ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ₹ 1.70 ಲಕ್ಷ ಹಾಗೂ ಕೈಸಾಲವನ್ನೂ ಮಾಡಿದ್ದರು. ಮನೆ ಕಟ್ಟುವ ಸಲುವಾಗಿ ಚೆನ್ನರಾಯ ಪಟ್ಟಣದ ಸೂರ್ಯೋದಯ ಪೈನಾನ್ಸ್ ಕಂಪನಿಯಿಂದ ₹ 5.20 ಲಕ್ಷ ಸಾಲ ಪಡೆದಿದ್ದರು. ಸಾಲದ ಕಂತು ಪಾವತಿಸದ ಕಾರಣಕ್ಕೆ ಫೈನಾನ್ಸ್ ಕಂಪನಿಯವರು ಮನೆಗೆ ಬೀಗ ಹಾಕಿದ್ದರು. ಇದರಿಂದ ನೊಂದು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರು ಅರಕಲಗೂಡು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-36-2093739639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>