<p>ಅರಕಲಗೂಡು: ತಾಲ್ಲೂಕಿನ ಕಸಬಾ ಹೋಬಳಿಯ ಕೆಲ ಭಾಗದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಗೆ ಬಾಳೆ, ಅಡಿಕೆ ತೆಂಗಿನ ಬೆಳೆಗಳು ತೀವ್ರ ಹಾನಿಗೊಳಗಾಗಿದೆ.</p>.<p>ಬೈಚನಹಳ್ಳಿ, ಮುದ್ದನಹಳ್ಳಿ, ಮೂಡನಹಳ್ಳಿ, ಕೇಶವಾಪುರ, ಬಸವನಹಳ್ಳಿ ಸೇರಿದಂತೆ ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿ ಭಾಗದಲ್ಲಿ ಮಳೆ ಸುರಿದಿದೆ. ಹಲವೆಡೆ ಮರಗಳು ಧರೆಗುರುಳಿವೆ.</p>.<p>ಬಸವನಹಳ್ಳಿ ಗ್ರಾಮದ ನಿಂಗರಾಜು ಅವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನೆಲಕಚ್ಚಿದೆ. ಬೆಳೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಕೆ.ಸಿ.ಸೌಮ್ಯ, ಕಂದಾಯ ಮತ್ತು ತೋಟಗಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಒಟ್ಟು 25 ಎಕರೆ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಗೊಳಗಾಗಿದೆ. ಬಾಳೆ 12 ಎಕರೆ, ಅಡಿಕೆ 9 ಎಕರೆ ಹಾಗೂ 3 ಎಕರೆ ಪ್ರದೇಶದ ತೆಂಗಿನ ಬೆಳೆ ಹಾನಿಗೊಳಗಾಗಿದ್ದು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ₹5.62 ಲಕ್ಷ ಬೆಳೆಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ.ರಾಜೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-36-1741718598</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ತಾಲ್ಲೂಕಿನ ಕಸಬಾ ಹೋಬಳಿಯ ಕೆಲ ಭಾಗದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಗೆ ಬಾಳೆ, ಅಡಿಕೆ ತೆಂಗಿನ ಬೆಳೆಗಳು ತೀವ್ರ ಹಾನಿಗೊಳಗಾಗಿದೆ.</p>.<p>ಬೈಚನಹಳ್ಳಿ, ಮುದ್ದನಹಳ್ಳಿ, ಮೂಡನಹಳ್ಳಿ, ಕೇಶವಾಪುರ, ಬಸವನಹಳ್ಳಿ ಸೇರಿದಂತೆ ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿ ಭಾಗದಲ್ಲಿ ಮಳೆ ಸುರಿದಿದೆ. ಹಲವೆಡೆ ಮರಗಳು ಧರೆಗುರುಳಿವೆ.</p>.<p>ಬಸವನಹಳ್ಳಿ ಗ್ರಾಮದ ನಿಂಗರಾಜು ಅವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನೆಲಕಚ್ಚಿದೆ. ಬೆಳೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಕೆ.ಸಿ.ಸೌಮ್ಯ, ಕಂದಾಯ ಮತ್ತು ತೋಟಗಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಒಟ್ಟು 25 ಎಕರೆ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಗೊಳಗಾಗಿದೆ. ಬಾಳೆ 12 ಎಕರೆ, ಅಡಿಕೆ 9 ಎಕರೆ ಹಾಗೂ 3 ಎಕರೆ ಪ್ರದೇಶದ ತೆಂಗಿನ ಬೆಳೆ ಹಾನಿಗೊಳಗಾಗಿದ್ದು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ₹5.62 ಲಕ್ಷ ಬೆಳೆಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ.ರಾಜೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-36-1741718598</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>