<p><strong>ಅರಕಲಗೂಡು:</strong> ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿಯ ಕಟ್ಟೆಪುರ ಏತ ನೀರಾವರಿ ಯೋಜನೆಯ ಕಾಮಗಾರಿ ವಿಳಂಬ ಕುರಿತು ಶಾಸಕ ಎ. ಮಂಜು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ‘ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ, ರೈತರ ಹಿತವನ್ನು ಕಡೆಗಣಿಸಿ ನಿರ್ಲಕ್ಷ್ಯ ವಹಿಸಿದರೆ ಸಹಿಸಲಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲುವೆ ನಿರ್ಮಾಣಕ್ಕೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಧನ ದೊರಕದ ಬಗ್ಗೆ ರೈತರು ಪ್ರಸ್ತಾಪಿಸಿದಾಗ, ಅರ್ಹ ರೈತರಿಗೆ ಶೀಘ್ರವಾಗಿ ಪರಿಹಾರ ಕೊಡಿಸುವ ಜವಾಬ್ದಾರಿಯನ್ನು ನಾನು ವಹಿಸುತ್ತೇನೆ ಎಂದು ಹೇಳಿದರು.</p>.<p>ಪೈಪ್ಲೈನ್ ಅಳವಡಿಸುವ ಸಂದರ್ಭದಲ್ಲಿನ ಗಿಡಮರ ನಾಶಕ್ಕೆ ಸಂಬಂಧಿಸಿದಂತೆ ಸಮರ್ಪಕ ಅಂದಾಜು ಪಟ್ಟಿ ತಯಾರಿಸಿ, ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಅರಕಲಗೂಡಿನಲ್ಲಿ ಶೀಘ್ರ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ವಿಳಂಬದ ಕುರಿತು ಚರ್ಚಿಸಲಾಗುವುದು. ಮುಂದಿನ 2–3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 78 ಕಿ.ಮೀ ಉದ್ದದ ವಿತರಣಾ ಲೈನ್ನಲ್ಲಿ ಈಗಾಗಲೇ 70 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ, ಬಾಕಿ ಇರುವ 8 ಕಿ.ಮೀ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ ಕೆರೆಕಟ್ಟೆ, ಬೈಸೂರು, ಬಾಗ್ದಾಳು, ಶಿರದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಸೂಚಿಸಿದರು.</p>.<p>ಹಾರಂಗಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ್, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು:</strong> ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿಯ ಕಟ್ಟೆಪುರ ಏತ ನೀರಾವರಿ ಯೋಜನೆಯ ಕಾಮಗಾರಿ ವಿಳಂಬ ಕುರಿತು ಶಾಸಕ ಎ. ಮಂಜು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ‘ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ, ರೈತರ ಹಿತವನ್ನು ಕಡೆಗಣಿಸಿ ನಿರ್ಲಕ್ಷ್ಯ ವಹಿಸಿದರೆ ಸಹಿಸಲಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲುವೆ ನಿರ್ಮಾಣಕ್ಕೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಧನ ದೊರಕದ ಬಗ್ಗೆ ರೈತರು ಪ್ರಸ್ತಾಪಿಸಿದಾಗ, ಅರ್ಹ ರೈತರಿಗೆ ಶೀಘ್ರವಾಗಿ ಪರಿಹಾರ ಕೊಡಿಸುವ ಜವಾಬ್ದಾರಿಯನ್ನು ನಾನು ವಹಿಸುತ್ತೇನೆ ಎಂದು ಹೇಳಿದರು.</p>.<p>ಪೈಪ್ಲೈನ್ ಅಳವಡಿಸುವ ಸಂದರ್ಭದಲ್ಲಿನ ಗಿಡಮರ ನಾಶಕ್ಕೆ ಸಂಬಂಧಿಸಿದಂತೆ ಸಮರ್ಪಕ ಅಂದಾಜು ಪಟ್ಟಿ ತಯಾರಿಸಿ, ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಅರಕಲಗೂಡಿನಲ್ಲಿ ಶೀಘ್ರ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ವಿಳಂಬದ ಕುರಿತು ಚರ್ಚಿಸಲಾಗುವುದು. ಮುಂದಿನ 2–3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 78 ಕಿ.ಮೀ ಉದ್ದದ ವಿತರಣಾ ಲೈನ್ನಲ್ಲಿ ಈಗಾಗಲೇ 70 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ, ಬಾಕಿ ಇರುವ 8 ಕಿ.ಮೀ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ ಕೆರೆಕಟ್ಟೆ, ಬೈಸೂರು, ಬಾಗ್ದಾಳು, ಶಿರದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಸೂಚಿಸಿದರು.</p>.<p>ಹಾರಂಗಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ್, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>