<p>ಅರಸೀಕೆರೆ: ‘ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ₹40 ಲಕ್ಷ ಮೀಸಲಿಟ್ಟಿರುವ ಅನುದಾನವನ್ನು ಜಿಲ್ಲಾಧಿಕಾರಿ ಬೇರೆ ಸಮುದಾಯ ಭವನ ನಿರ್ಮಿಸಲು ಆದೇಶ ಮಾಡಲಾಗಿದ್ದು, ಈ ಲೋಪ ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.</p>.<p>ನಗರದ ತಾಲ್ಲೂಕು ಕಚೇರಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ತಹಶೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭ ಮಾತನಾಡಿದ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ, ‘ಯಾವುದೇ ಯೋಜನೆಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗಾಗಿ ಬಳಸಬಾರದು. ಆದರೆ ನಗರದ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹40 ಲಕ್ಷ ಮೀಸಲಿರಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಮೀಸಲಿಟ್ಟ ಹಣವನ್ನು ಇದೀಗ ಬೇರೆ ಕಾಮಗಾರಿ ಕೈಗೆತ್ತಿಕೊಳ್ಳಲು ಹೊರಡಿಸಿರುವ ಆದೇಶ ಪರಿಷ್ಕರಿಸಿ ತಕ್ಷಣವೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇಲಾಖೆ ಹಣವನ್ನು ಯಾವ ಉದ್ದೇಶಕ್ಕಾಗಿ ಮೀಸಲಿಡಲಾಗಿದೆಯೋ, ಅ ಒಂದು ಯೋಜನೆಗೆ ಮಾತ್ರ ಸದುಪಯೋಗ ಮಾಡಿಕೊಳ್ಳಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಿ ಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಪಾಧ್ಯಕ್ಷ ಎ.ಬಿ.ಗುರುಸಿದ್ದೇಶ್, ಮಹಿಳಾ ಘಟಕದ ಅನುರಾಧ ಕುಮಾರಸ್ವಾಮಿ, ಎಸ್.ಎಂ.ಎಸ್ ಕುಮಾರ್, ಆರ್.ಜಿ.ರಾಘವೇಂದ್ರ, ಆನಂದ್, ಚಂದ್ರಶೇಖರ್, ಶಶಿಧರ್, ,ಪವನ್ ಎ.ಪಿ, ಜಗದೀಶ್, ವಿರೂಪಾಕ್ಷಪ್ಪ, ಭರತೇಶ್, ಲೋಕೇಶ್ ನೀರಗುಂದ, ಓಂಕಾರಮೂರ್ತಿ, ಮಲ್ಲೇಶ್ , ಹೇಮಾವತಿ, ಗೌರಮ್ಮ, ಸರೋಜಾ, ಪ್ರೇಮಾ ಗಿರೀಶ್, ಎ.ಎಲ್.ಮೋಹನ್ ಕುಮಾರ್, ಪಂಚಾಕ್ಷರಿ, ಗಗನ್, ನಂಜುಂಡ ಸ್ವಾಮಿ, ಲಿಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-36-851950629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ‘ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ₹40 ಲಕ್ಷ ಮೀಸಲಿಟ್ಟಿರುವ ಅನುದಾನವನ್ನು ಜಿಲ್ಲಾಧಿಕಾರಿ ಬೇರೆ ಸಮುದಾಯ ಭವನ ನಿರ್ಮಿಸಲು ಆದೇಶ ಮಾಡಲಾಗಿದ್ದು, ಈ ಲೋಪ ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.</p>.<p>ನಗರದ ತಾಲ್ಲೂಕು ಕಚೇರಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ತಹಶೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭ ಮಾತನಾಡಿದ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ, ‘ಯಾವುದೇ ಯೋಜನೆಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗಾಗಿ ಬಳಸಬಾರದು. ಆದರೆ ನಗರದ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹40 ಲಕ್ಷ ಮೀಸಲಿರಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಮೀಸಲಿಟ್ಟ ಹಣವನ್ನು ಇದೀಗ ಬೇರೆ ಕಾಮಗಾರಿ ಕೈಗೆತ್ತಿಕೊಳ್ಳಲು ಹೊರಡಿಸಿರುವ ಆದೇಶ ಪರಿಷ್ಕರಿಸಿ ತಕ್ಷಣವೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇಲಾಖೆ ಹಣವನ್ನು ಯಾವ ಉದ್ದೇಶಕ್ಕಾಗಿ ಮೀಸಲಿಡಲಾಗಿದೆಯೋ, ಅ ಒಂದು ಯೋಜನೆಗೆ ಮಾತ್ರ ಸದುಪಯೋಗ ಮಾಡಿಕೊಳ್ಳಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಿ ಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಪಾಧ್ಯಕ್ಷ ಎ.ಬಿ.ಗುರುಸಿದ್ದೇಶ್, ಮಹಿಳಾ ಘಟಕದ ಅನುರಾಧ ಕುಮಾರಸ್ವಾಮಿ, ಎಸ್.ಎಂ.ಎಸ್ ಕುಮಾರ್, ಆರ್.ಜಿ.ರಾಘವೇಂದ್ರ, ಆನಂದ್, ಚಂದ್ರಶೇಖರ್, ಶಶಿಧರ್, ,ಪವನ್ ಎ.ಪಿ, ಜಗದೀಶ್, ವಿರೂಪಾಕ್ಷಪ್ಪ, ಭರತೇಶ್, ಲೋಕೇಶ್ ನೀರಗುಂದ, ಓಂಕಾರಮೂರ್ತಿ, ಮಲ್ಲೇಶ್ , ಹೇಮಾವತಿ, ಗೌರಮ್ಮ, ಸರೋಜಾ, ಪ್ರೇಮಾ ಗಿರೀಶ್, ಎ.ಎಲ್.ಮೋಹನ್ ಕುಮಾರ್, ಪಂಚಾಕ್ಷರಿ, ಗಗನ್, ನಂಜುಂಡ ಸ್ವಾಮಿ, ಲಿಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-36-851950629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>