<p>ಅರಸೀಕೆರೆ: ಅರಸೀಕೆರೆ ರೈಲ್ವೆ ರಕ್ಷಣಾ ಪಡೆ ಹಾಗೂ ರೈಲ್ವೆ ಪೊಲೀಸ್ ತಂಡವು ಪ್ರಯಾಣಿಕರ ವಸ್ತುಗಳ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ದಾವಣಗೆರೆಯ ಸಂಗಮೇಶ್ ಎಂಬಾತನನ್ನು ಬಂಧಿಸಿದ್ದು, ಆತನಿಂದ ₹1,15,970 ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಮಾರ್ಚ್ 4ರಂದು ಚಂಡೀಗಢ–ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತಮ್ಮ ಲ್ಯಾಪ್ಟಾಪ್ ಬ್ಯಾಗ್ ಕಳುವಾಗಿದೆ ಎಂದು ಹಾವೇರಿ ಜಿಲ್ಲೆಯ ನಿವಾಸಿ ಚಂದ್ರಗೌಡ ಪಾಟೀಲ ದೂರು ಸಲ್ಲಿಸಿದ್ದರು. ರೈಲು ಯಶವಂತಪುರ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಎಸ್-2 ಕೋಚ್ನಲ್ಲಿದ್ದ ಅವರ ಬ್ಯಾಗ್ ಕಾಣೆಯಾಗಿರುವುದನ್ನು ಗಮನಿಸಿದರು. ಆ ಬ್ಯಾಗ್ನಲ್ಲಿ ಡೆಲ್ ಲ್ಯಾಪ್ಟಾಪ್, ವಿವೋಗಾರ್ ಫೋಕಸ್ ಬ್ಲೂಟೂತ್ ಹೆಡ್ಫೋನ್ ಹಾಗೂ ಕಂಪನಿಯ ಐಡಿ ಕಾರ್ಡ್ ಇದ್ದವು.</p>.<p>ಅರಸೀಕೆರೆ ಆರ್ಟಿಎಫ್ ಇನ್ಸ್ಪೆಕ್ಟರ್ ಹಾಗೂ ಸಿಪಿಡಿಎಸ್ ಮೈಸೂರು ಪ್ರಭಾರಿ ರಾಕೇಶ್ ಕುಮಾರ್ ನಿರ್ದೇಶನದ ಮೇರೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡವು ಘಟನೆ ನಡೆದ ದಿನದ ಎಸ್-2 ಕೋಚ್ನ ಸಿಸಿಟಿವಿ ದೃಶ್ಯಾವಳಿಯನ್ನು ಸಮಗ್ರವಾಗಿ ಪರಿಶೀಲಿಸಿತು. ಒಬ್ಬ ಸಂಶಯಾಸ್ಪದ ವ್ಯಕ್ತಿ ಪ್ರಯಾಣಿಕರ ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವುದು ದೃಶ್ಯಗಳಲ್ಲಿ ಪತ್ತೆಯಾಯಿತು.</p>.<p>ಮಾರ್ಚ್ 10 ರಂದು ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಸಂಯುಕ್ತ ತಂಡವು ಅರಸೀಕೆರೆ ರೈಲು ನಿಲ್ದಾಣದಲ್ಲಿ ನಿಗಾ ವಹಿಸಿತ್ತು. ಬೆಳಿಗ್ಗೆ 9.45ಕ್ಕೆ ವಾಸ್ಕೊ ಡಿ ಗಾಮಾ–ಯಶವಂತಪುರ ಎಕ್ಸ್ಪ್ರೆಸ್ ನಿಲ್ದಾಣಕ್ಕೆ ಬಂದಾಗ ಸಂಶಯಾಸ್ಪದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಬಂಧಿತನನ್ನು ಸಂಗಮೇಶ್ ಜಿ. ಎಂದು ಗುರುತಿಸಲಾಗಿದ್ದು, ಈತ ದಾವಣಗೆರೆ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ವಿಚಾರಣೆಯ ವೇಳೆ ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ಡೆಲ್ ಲ್ಯಾಪ್ಟಾಪ್, ವಿವೋಗಾರ್ ಫೋಕಸ್ ಬ್ಲೂಟೂತ್ ಹೆಡ್ಫೋನ್, ಕಂಪನಿ ಐಡಿ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಆರೋಪಿಯನ್ನು ಚನ್ನರಾಯಪಟ್ಟಣದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಅರಸೀಕೆರೆ ರೈಲ್ವೆ ರಕ್ಷಣಾ ಪಡೆ ಹಾಗೂ ರೈಲ್ವೆ ಪೊಲೀಸ್ ತಂಡವು ಪ್ರಯಾಣಿಕರ ವಸ್ತುಗಳ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ದಾವಣಗೆರೆಯ ಸಂಗಮೇಶ್ ಎಂಬಾತನನ್ನು ಬಂಧಿಸಿದ್ದು, ಆತನಿಂದ ₹1,15,970 ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಮಾರ್ಚ್ 4ರಂದು ಚಂಡೀಗಢ–ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತಮ್ಮ ಲ್ಯಾಪ್ಟಾಪ್ ಬ್ಯಾಗ್ ಕಳುವಾಗಿದೆ ಎಂದು ಹಾವೇರಿ ಜಿಲ್ಲೆಯ ನಿವಾಸಿ ಚಂದ್ರಗೌಡ ಪಾಟೀಲ ದೂರು ಸಲ್ಲಿಸಿದ್ದರು. ರೈಲು ಯಶವಂತಪುರ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಎಸ್-2 ಕೋಚ್ನಲ್ಲಿದ್ದ ಅವರ ಬ್ಯಾಗ್ ಕಾಣೆಯಾಗಿರುವುದನ್ನು ಗಮನಿಸಿದರು. ಆ ಬ್ಯಾಗ್ನಲ್ಲಿ ಡೆಲ್ ಲ್ಯಾಪ್ಟಾಪ್, ವಿವೋಗಾರ್ ಫೋಕಸ್ ಬ್ಲೂಟೂತ್ ಹೆಡ್ಫೋನ್ ಹಾಗೂ ಕಂಪನಿಯ ಐಡಿ ಕಾರ್ಡ್ ಇದ್ದವು.</p>.<p>ಅರಸೀಕೆರೆ ಆರ್ಟಿಎಫ್ ಇನ್ಸ್ಪೆಕ್ಟರ್ ಹಾಗೂ ಸಿಪಿಡಿಎಸ್ ಮೈಸೂರು ಪ್ರಭಾರಿ ರಾಕೇಶ್ ಕುಮಾರ್ ನಿರ್ದೇಶನದ ಮೇರೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡವು ಘಟನೆ ನಡೆದ ದಿನದ ಎಸ್-2 ಕೋಚ್ನ ಸಿಸಿಟಿವಿ ದೃಶ್ಯಾವಳಿಯನ್ನು ಸಮಗ್ರವಾಗಿ ಪರಿಶೀಲಿಸಿತು. ಒಬ್ಬ ಸಂಶಯಾಸ್ಪದ ವ್ಯಕ್ತಿ ಪ್ರಯಾಣಿಕರ ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವುದು ದೃಶ್ಯಗಳಲ್ಲಿ ಪತ್ತೆಯಾಯಿತು.</p>.<p>ಮಾರ್ಚ್ 10 ರಂದು ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಸಂಯುಕ್ತ ತಂಡವು ಅರಸೀಕೆರೆ ರೈಲು ನಿಲ್ದಾಣದಲ್ಲಿ ನಿಗಾ ವಹಿಸಿತ್ತು. ಬೆಳಿಗ್ಗೆ 9.45ಕ್ಕೆ ವಾಸ್ಕೊ ಡಿ ಗಾಮಾ–ಯಶವಂತಪುರ ಎಕ್ಸ್ಪ್ರೆಸ್ ನಿಲ್ದಾಣಕ್ಕೆ ಬಂದಾಗ ಸಂಶಯಾಸ್ಪದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಬಂಧಿತನನ್ನು ಸಂಗಮೇಶ್ ಜಿ. ಎಂದು ಗುರುತಿಸಲಾಗಿದ್ದು, ಈತ ದಾವಣಗೆರೆ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ವಿಚಾರಣೆಯ ವೇಳೆ ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ಡೆಲ್ ಲ್ಯಾಪ್ಟಾಪ್, ವಿವೋಗಾರ್ ಫೋಕಸ್ ಬ್ಲೂಟೂತ್ ಹೆಡ್ಫೋನ್, ಕಂಪನಿ ಐಡಿ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಆರೋಪಿಯನ್ನು ಚನ್ನರಾಯಪಟ್ಟಣದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>