<p>ಅರಸೀಕೆರೆ: ಎತ್ತಿನಹೊಳೆ ಯೋಜನೆಯಿಂದ ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ಹರಿಸಲು ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿದಿದ್ದು, ಯೋಜನೆಯ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಗಮನಹರಿಸಿ ನೀರು ಹರಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ನಾರಾಯಣಘಟ್ಟ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ₹ 75 ಲಕ್ಷ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಮಳೆಯಿಲ್ಲದೆ ಇಂದು ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಕೊಳವೆಬಾವಿಗಳಲ್ಲಿ ನೀರು ಕಡಿಮೆ ಆಗಿತ್ತು. ಮಳೆಗಾಲದಲ್ಲಿ ಬಿದ್ದ ನೀರನ್ನು ಸಂಗ್ರಹ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ಸಾವಿರಾರು ಚೆಕ್ ಡ್ಯಾಂ, ಬ್ರಿಡ್ಜ್ ಹಾಗೂ ಬ್ಯಾರೇಜ್ಗಳನ್ನು ನಿರ್ಮಿಸಿದ್ದೇನೆ’ ಎಂದರು.</p>.<p>‘ಇದರಿಂದ ರೈತರ ಕೊಳವೆಬಾವಿಗಳಲ್ಲಿ ವರ್ಷವಿಡೀ ನೀರು ಇದ್ದು ಅಂತರ್ಜಲ ಮಟ್ಟ ಹೆಚ್ಚಾಗಿ ಇರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡುವುದರಿಂದ ಕೃಷಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>‘ಸೋಲಾರ್ ವಿದ್ಯುತ್ಗೂ ಆದ್ಯತೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಕಾರ್ಯಗಳೇ ನನ್ನ ಮೂಲಮಂತ್ರ’ ಎಂದರು.</p>.<p>ಮುಖಂಡರಾದ ಕೆಲ್ಲೆಂಗೆರೆ ಗುರುಮೂರ್ತಿ, ಕುಮಾರ, ಚನ್ನಬಸಪ್ಪ, ಚಿದಾನಂದ, ಯತೀಶ ನಾರಾಯಣಘಟ್ಟಹಳ್ಳಿಯ ಚಂದ್ರು, ವಸಂತ, ರವಿ, ನಾಗೇನಹಳ್ಳಿ ದಯಾನಂದ, ಎ.ಇ.ಇ ಸುಂದರರಾಜ್, ಗುತ್ತಿಗೆದಾರ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-45470062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಎತ್ತಿನಹೊಳೆ ಯೋಜನೆಯಿಂದ ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ಹರಿಸಲು ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿದಿದ್ದು, ಯೋಜನೆಯ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಗಮನಹರಿಸಿ ನೀರು ಹರಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ನಾರಾಯಣಘಟ್ಟ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ₹ 75 ಲಕ್ಷ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಮಳೆಯಿಲ್ಲದೆ ಇಂದು ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಕೊಳವೆಬಾವಿಗಳಲ್ಲಿ ನೀರು ಕಡಿಮೆ ಆಗಿತ್ತು. ಮಳೆಗಾಲದಲ್ಲಿ ಬಿದ್ದ ನೀರನ್ನು ಸಂಗ್ರಹ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ಸಾವಿರಾರು ಚೆಕ್ ಡ್ಯಾಂ, ಬ್ರಿಡ್ಜ್ ಹಾಗೂ ಬ್ಯಾರೇಜ್ಗಳನ್ನು ನಿರ್ಮಿಸಿದ್ದೇನೆ’ ಎಂದರು.</p>.<p>‘ಇದರಿಂದ ರೈತರ ಕೊಳವೆಬಾವಿಗಳಲ್ಲಿ ವರ್ಷವಿಡೀ ನೀರು ಇದ್ದು ಅಂತರ್ಜಲ ಮಟ್ಟ ಹೆಚ್ಚಾಗಿ ಇರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡುವುದರಿಂದ ಕೃಷಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>‘ಸೋಲಾರ್ ವಿದ್ಯುತ್ಗೂ ಆದ್ಯತೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಕಾರ್ಯಗಳೇ ನನ್ನ ಮೂಲಮಂತ್ರ’ ಎಂದರು.</p>.<p>ಮುಖಂಡರಾದ ಕೆಲ್ಲೆಂಗೆರೆ ಗುರುಮೂರ್ತಿ, ಕುಮಾರ, ಚನ್ನಬಸಪ್ಪ, ಚಿದಾನಂದ, ಯತೀಶ ನಾರಾಯಣಘಟ್ಟಹಳ್ಳಿಯ ಚಂದ್ರು, ವಸಂತ, ರವಿ, ನಾಗೇನಹಳ್ಳಿ ದಯಾನಂದ, ಎ.ಇ.ಇ ಸುಂದರರಾಜ್, ಗುತ್ತಿಗೆದಾರ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-45470062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>