ಕಾಯ್ದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸಾರ್ವಜನಿಕರ ಆಸ್ತಿ, ಪಾಸ್ತಿ ನಷ್ಟವಾಗುತ್ತಿದೆ. ಹಾಗಾಗಿ ಈ ಕಾಯ್ದೆ ಜಾರಿಗೊಳಿಸಿದರೆ ಯಾರಿಗೆ ಅನುಕೂಲವಾಗುತ್ತದೆ, ಯಾರಿಗೆ ತೊಂದರೆ ಆಗುತ್ತದೆ ಎಂಬುದರ ಕುರಿತು ಜಾಗೃತಿ ಮೂಡಿಸಬೇಕು. ಇಲ್ಲವಾದರೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ರಾಜ್ಯಸಭೆಯಲೂ ಜೆಡಿಎಸ್ ಸದಸ್ಯರು ಈ ತಿದ್ದುಪಡಿ ಕಾಯ್ದೆಯ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.