<p><strong>ಸಕಲೇಶಪುರ</strong>: ಆನೆ ಅರ್ಜುನನ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಗ್ರಹಿಸಿದರು.</p>.<p>ಕಾಡಾನೆ ಸೆರೆ ಹಿಡಿಯುವ ಕಾರ್ಯಚಾರಣೆಗೆ ಅರ್ಜುನನ್ನು ಬಳಕೆ ಮಾಡಿಕೊಂಡಿದ್ದೇ ಮೊದಲ ತಪ್ಪು. 60 ವರ್ಷ ದಾಟಿದ ಆನೆಗಳನ್ನು ಇಂತಹ ಕಠಿಣ ಕಾರ್ಯಾಚರಣೆಗೆ ಬಳಸಿಕೊಳ್ಳಬಾರದು ಎಂಬುವ ಸಾಮಾನ್ಯ ಜ್ಞಾನ ಅಧಿಕಾರಿಗಳಿಗೆ ಇಲ್ಲದೆ ಇರುವುದು ಆ ಇಲಾಖೆಯ ವೈಫಲ್ಯ ಎತ್ತಿ ತೋರಿಸುತ್ತದೆ. ಕಾಡಾನೆ ಕಾರ್ಯಾಚರಣೆ ನಡೆಸುವುದಕ್ಕೆ ನುರಿತ ತಜ್ಞರ ತಂಡವೇ ಇಲ್ಲದೆ ಏಕಾಏಕಿ ಅರ್ಜುನನ್ನು ಕಾಡಾನೆ ಹಿಡಿಯಲು ಕಳಿಸಿದ್ದೇ ಅವೈಜ್ಞಾನಿಕ. ಅರ್ಜುನನ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p><strong>ಖಂಡನೆ:</strong> ಅರ್ಜುನ ಸಾವಿನ ತನಿಖೆ ನಡೆಸುವಂತೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಹಾಗೂ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಖಂಡನೀಯ. ಅಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಪ್ರತಿಭಟನೆ ಮಾಡುವವರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದರು.</p>.<p>ಯುವ ಜನತಾದಳ ಅಧ್ಯಕ್ಷ ಸ.ಬ. ಭಾಸ್ಕರ್, ಪುರಸಭಾ ಮಾಜಿ ಅಧ್ಯಕ್ಷ ಕಾಡಪ್ಪ, ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್, ಆನೇಹಲ್ ಹಸೈನಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ಆನೆ ಅರ್ಜುನನ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಗ್ರಹಿಸಿದರು.</p>.<p>ಕಾಡಾನೆ ಸೆರೆ ಹಿಡಿಯುವ ಕಾರ್ಯಚಾರಣೆಗೆ ಅರ್ಜುನನ್ನು ಬಳಕೆ ಮಾಡಿಕೊಂಡಿದ್ದೇ ಮೊದಲ ತಪ್ಪು. 60 ವರ್ಷ ದಾಟಿದ ಆನೆಗಳನ್ನು ಇಂತಹ ಕಠಿಣ ಕಾರ್ಯಾಚರಣೆಗೆ ಬಳಸಿಕೊಳ್ಳಬಾರದು ಎಂಬುವ ಸಾಮಾನ್ಯ ಜ್ಞಾನ ಅಧಿಕಾರಿಗಳಿಗೆ ಇಲ್ಲದೆ ಇರುವುದು ಆ ಇಲಾಖೆಯ ವೈಫಲ್ಯ ಎತ್ತಿ ತೋರಿಸುತ್ತದೆ. ಕಾಡಾನೆ ಕಾರ್ಯಾಚರಣೆ ನಡೆಸುವುದಕ್ಕೆ ನುರಿತ ತಜ್ಞರ ತಂಡವೇ ಇಲ್ಲದೆ ಏಕಾಏಕಿ ಅರ್ಜುನನ್ನು ಕಾಡಾನೆ ಹಿಡಿಯಲು ಕಳಿಸಿದ್ದೇ ಅವೈಜ್ಞಾನಿಕ. ಅರ್ಜುನನ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p><strong>ಖಂಡನೆ:</strong> ಅರ್ಜುನ ಸಾವಿನ ತನಿಖೆ ನಡೆಸುವಂತೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಹಾಗೂ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಖಂಡನೀಯ. ಅಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಪ್ರತಿಭಟನೆ ಮಾಡುವವರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದರು.</p>.<p>ಯುವ ಜನತಾದಳ ಅಧ್ಯಕ್ಷ ಸ.ಬ. ಭಾಸ್ಕರ್, ಪುರಸಭಾ ಮಾಜಿ ಅಧ್ಯಕ್ಷ ಕಾಡಪ್ಪ, ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್, ಆನೇಹಲ್ ಹಸೈನಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>