<p><strong>ಅರಕಲಗೂಡು (ಹಾಸನ ಜಿಲ್ಲೆ): </strong>ತಾಲ್ಲೂಕಿನ ಸಂತೆಮರೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಅವರು ವೈಯಕ್ತಿಕವಾಗಿ ₹80 ಸಾವಿರ ವೆಚ್ಚ ಮಾಡಿ, ವಾರದ ಹಿಂದೆ ಕೊಳವೆಬಾವಿ ಕೊರೆಸಿ ಶಾಲೆಯ ನೀರಿನ ಕೊರತೆ ನೀಗಿಸಿದ್ದಾರೆ. </p><p>‘ಕುಡಿಯಲು ಹಾಗೂ ಶೌಚಾಲಯಕ್ಕೆ ನೀರಿನ ತೀವ್ರ ಸಮಸ್ಯೆ ಇದ್ದುದನ್ನು ಗಮನಿಸಿ, ಕೊಳವೆಬಾವಿ ಕೊರೆಸಿ ಮೋಟಾರ್ ಅಳವಡಿಸಲಾಗಿದೆ’ ಎಂದು ಅವರು ತಿಳಿಸಿದರು.</p><p>‘ಶಾಲೆಗೆ ಕಿಟಕಿ, ಬಾಗಿಲು ದುರಸ್ತಿ ಅಗತ್ಯವಿದೆ. ವಿದೇಶದಲ್ಲಿರುವ ಮಗಳು ₹20 ಸಾವಿರ ನೀಡುವುದಾಗಿ ಹೇಳಿದ್ದಾಳೆ. ಉಳಿಕೆ ಹಣ ಭರಿಸಿ ದುರಸ್ತಿ ಮಾಡಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು. </p>.<p>ಶಾಲೆಗೆ ಭೇಟಿ ನೀಡಿದ ಬಿಇಒ ಕೆ.ಪಿ.ನಾರಾಯಣ್ ಮಾತನಾಡಿ, ‘ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿದ್ದ ಶಾಲೆಗೆ ಮುಖ್ಯಶಿಕ್ಷಕಿ ಶಾಶ್ವತ ಪರಿಹಾರ ಒದಗಿಸಿರುವುದು ಶ್ಲಾಘನೀಯ. ಅವರ ಸೇವೆ ಅನನ್ಯ’ ಎಂದರು.</p>.<p>‘ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಈಗಾಗಲೇ ₹2.5 ಲಕ್ಷ ಅನುದಾನ ನಿಗದಿಯಾಗಿದ್ದು, ಹೆಚ್ಚುವರಿ ಆರ್ಥಿಕ ನೆರವನ್ನೂ ಒದಗಿಸಲಾಗುವುದು’ ಎಂದರು.</p>.<p>ಶಿಕ್ಷಣ ಸಂಯೋಜಕ ಯೋಗೇಶ್, ಎಸ್ಡಿಎಂಸಿ ಅಧ್ಯಕ್ಷ ರವಿ ಮಾತನಾಡಿದರು. ಶಿಕ್ಷಕರಾದ ಇಂದ್ರೇಗೌಡ, ಓದೇಶ್, ಪಾಂಡುರಾಜನ್, ಓಬಳೇಶ, ಮಹೇಶ್, ವಸಂತಕುಮಾರ್, ರೇಖಾ, ಶೈಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು (ಹಾಸನ ಜಿಲ್ಲೆ): </strong>ತಾಲ್ಲೂಕಿನ ಸಂತೆಮರೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಅವರು ವೈಯಕ್ತಿಕವಾಗಿ ₹80 ಸಾವಿರ ವೆಚ್ಚ ಮಾಡಿ, ವಾರದ ಹಿಂದೆ ಕೊಳವೆಬಾವಿ ಕೊರೆಸಿ ಶಾಲೆಯ ನೀರಿನ ಕೊರತೆ ನೀಗಿಸಿದ್ದಾರೆ. </p><p>‘ಕುಡಿಯಲು ಹಾಗೂ ಶೌಚಾಲಯಕ್ಕೆ ನೀರಿನ ತೀವ್ರ ಸಮಸ್ಯೆ ಇದ್ದುದನ್ನು ಗಮನಿಸಿ, ಕೊಳವೆಬಾವಿ ಕೊರೆಸಿ ಮೋಟಾರ್ ಅಳವಡಿಸಲಾಗಿದೆ’ ಎಂದು ಅವರು ತಿಳಿಸಿದರು.</p><p>‘ಶಾಲೆಗೆ ಕಿಟಕಿ, ಬಾಗಿಲು ದುರಸ್ತಿ ಅಗತ್ಯವಿದೆ. ವಿದೇಶದಲ್ಲಿರುವ ಮಗಳು ₹20 ಸಾವಿರ ನೀಡುವುದಾಗಿ ಹೇಳಿದ್ದಾಳೆ. ಉಳಿಕೆ ಹಣ ಭರಿಸಿ ದುರಸ್ತಿ ಮಾಡಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು. </p>.<p>ಶಾಲೆಗೆ ಭೇಟಿ ನೀಡಿದ ಬಿಇಒ ಕೆ.ಪಿ.ನಾರಾಯಣ್ ಮಾತನಾಡಿ, ‘ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿದ್ದ ಶಾಲೆಗೆ ಮುಖ್ಯಶಿಕ್ಷಕಿ ಶಾಶ್ವತ ಪರಿಹಾರ ಒದಗಿಸಿರುವುದು ಶ್ಲಾಘನೀಯ. ಅವರ ಸೇವೆ ಅನನ್ಯ’ ಎಂದರು.</p>.<p>‘ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಈಗಾಗಲೇ ₹2.5 ಲಕ್ಷ ಅನುದಾನ ನಿಗದಿಯಾಗಿದ್ದು, ಹೆಚ್ಚುವರಿ ಆರ್ಥಿಕ ನೆರವನ್ನೂ ಒದಗಿಸಲಾಗುವುದು’ ಎಂದರು.</p>.<p>ಶಿಕ್ಷಣ ಸಂಯೋಜಕ ಯೋಗೇಶ್, ಎಸ್ಡಿಎಂಸಿ ಅಧ್ಯಕ್ಷ ರವಿ ಮಾತನಾಡಿದರು. ಶಿಕ್ಷಕರಾದ ಇಂದ್ರೇಗೌಡ, ಓದೇಶ್, ಪಾಂಡುರಾಜನ್, ಓಬಳೇಶ, ಮಹೇಶ್, ವಸಂತಕುಮಾರ್, ರೇಖಾ, ಶೈಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>