ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳ್ಳನ ಬಂಧನ: ಚಿನ್ನಾಭರಣ ವಶ

Last Updated 12 ಅಕ್ಟೋಬರ್ 2020, 8:41 IST
ಅಕ್ಷರ ಗಾತ್ರ

ಹಾಸನ: ಮನೆಗಳ್ಳನನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ₹1,50 ಲಕ್ಷ ಮೌಲ್ಯದ ಚಿನ್ನಾಭರಣ
ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ (20) ಬಂಧಿತ ವ್ಯಕ್ತಿ. ನಗರ
ನಿವಾಸಿ ಹೇಮಲತಾ ಅವರು ಕೊಡ್ಲಿಪೇಟೆ ಸಮೀಪದ ದೊಡ್ಡ ಬಂಡಾರ ಗ್ರಾಮಕ್ಕೆ ಹೋಗಿದ್ದ ವೇಳೆ ಮನೆಯ ಬಾಗಿಲು ಮುರಿದು ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.

ಅ.10 ರಂದು ನಗರದ ಬೇಲೂರು ರಸ್ತೆಯ ವಿಜಯನಗರ ಬಸ್‌ ನಿಲ್ದಾಣ ಬಳಿ ಅನುಮಾನಸ್ಪದವಾಗಿ ನಿಂತಿದ್ದ
ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಪತ್ತೆ ಕಾರ್ಯದಲ್ಲಿ ನಗರ ವೃತ್ತದ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೃಷ್ಣರಾಜು, ಪಿಎಸ್‌ಐ ಮತ್ತು ಸಿಬ್ಬಂದಿ
ಶ್ರಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT