<p><strong>ಅರಸೀಕೆರೆ:</strong> ಶಿಕ್ಷಕರ ದೈನಂದಿನ ಬೋಧನಾ ಒತ್ತಡದಿಂದ ವಿರಾಮ ನೀಡಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸಕ್ರಿಯವಾಗಿರಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>ನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅರಸೀಕೆರೆ ತಾಲ್ಲೂಕು ಘಟಕದ ಕಸಬಾ 2 ಶಿಕ್ಷಕರ ವಿಭಾಗ ಶನಿವಾರ ಹಮ್ಮಿಕೊಂಡಿದ್ದ ಕ್ರಿಕೆಟ್ ಮತ್ತು ಥ್ರೊಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಬೇಕು. ಮಾರ್ಗದರ್ಶನವಿಲ್ಲದೆ ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ನಗರಸಭಾ ಮಾಜಿ ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, ಶಿಕ್ಷಕರು ಇಲ್ಲದೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವೇ ಇಲ್ಲ. ಶಿಕ್ಷಕರು ಉತ್ತಮ ವಾತಾವರಣದಲ್ಲಿ ಮನಸ್ಸನ್ನು ಶಾಂತ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕಾಗಿರುತ್ತದೆ. ಇದಕ್ಕೆ ಕ್ರೀಡೆ ಸಹಕಾರಿ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ , ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು ಕೆ.ಎಸ್., ನೌಕರರ ಸಂಘದ ನಿರ್ದೇಶಕ ಹುಲ್ಲಳ್ಳಿ ಬಸವರಾಜು, ಸಹಕಾರ್ಯದರ್ಶಿ ಶಾಂತಮ್ಮ , ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಉಪಾಧ್ಯಕ್ಷ ದೇವೇಗೌಡ, ಶಿಕ್ಷಣ ಸಂಯೋಜಕ ಮಲ್ಲೇಶ್, ನಿಂಗಪ್ಪ, ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಶಿಕ್ಷಕರ ದೈನಂದಿನ ಬೋಧನಾ ಒತ್ತಡದಿಂದ ವಿರಾಮ ನೀಡಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸಕ್ರಿಯವಾಗಿರಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>ನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅರಸೀಕೆರೆ ತಾಲ್ಲೂಕು ಘಟಕದ ಕಸಬಾ 2 ಶಿಕ್ಷಕರ ವಿಭಾಗ ಶನಿವಾರ ಹಮ್ಮಿಕೊಂಡಿದ್ದ ಕ್ರಿಕೆಟ್ ಮತ್ತು ಥ್ರೊಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಬೇಕು. ಮಾರ್ಗದರ್ಶನವಿಲ್ಲದೆ ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ನಗರಸಭಾ ಮಾಜಿ ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, ಶಿಕ್ಷಕರು ಇಲ್ಲದೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವೇ ಇಲ್ಲ. ಶಿಕ್ಷಕರು ಉತ್ತಮ ವಾತಾವರಣದಲ್ಲಿ ಮನಸ್ಸನ್ನು ಶಾಂತ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕಾಗಿರುತ್ತದೆ. ಇದಕ್ಕೆ ಕ್ರೀಡೆ ಸಹಕಾರಿ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ , ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು ಕೆ.ಎಸ್., ನೌಕರರ ಸಂಘದ ನಿರ್ದೇಶಕ ಹುಲ್ಲಳ್ಳಿ ಬಸವರಾಜು, ಸಹಕಾರ್ಯದರ್ಶಿ ಶಾಂತಮ್ಮ , ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಉಪಾಧ್ಯಕ್ಷ ದೇವೇಗೌಡ, ಶಿಕ್ಷಣ ಸಂಯೋಜಕ ಮಲ್ಲೇಶ್, ನಿಂಗಪ್ಪ, ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>