<p><strong>ಹೊಳೆನರಸೀಪುರ:</strong> ಶಾಸಕ ಎಚ್.ಡಿ. ರೇವಣ್ಣ ಭಾನುವಾರ ಹೊಳೆನರಸೀಪುರದ ವಿವಿಧ ದೇಗುಲಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬಕ್ಕೆ ಎದುರಾಗಿರುವ ಸಂಕಷ್ಟಗಳು ದೂರವಾಗಲು ರೇವಣ್ಣ ದೇವರ ಮೊರೆ ಹೋಗಿದ್ದಾರೆ.</p><p>ಬೆಳಿಗ್ಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಅವರು, ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.</p><p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೋತ್ತರ ಸಮೀಕ್ಷಗಳ ಕುರಿತು ಪ್ರತಿಕ್ರಿಯಿಸಿ, ‘ಅದರ ಬಗ್ಗೆ ನಾನು ಇವತ್ತು ಏನೂ ಹೇಳಲ್ಲ. ಈ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಲಕ್ಷ್ಮೀನರಸಿಂಹ ಸ್ವಾಮಿ ಇರುವವರೆಗೂ ನಮಗೇನು ತೊಂದರೆಯಿಲ್ಲ. ಲೋಕಸಭೆ ಚುನಾವಣೆಯ ಮೂರು ಕ್ಷೇತ್ರ ಗೆಲ್ಲುತ್ತೇವೆ’ ಎಂದು ಹೇಳಿದರು.</p><p>ಭವಾನಿ ರೇವಣ್ಣ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದೇನೂ ನನಗೆ ಗೊತ್ತಿಲ್ಲ’ ಎಂದಷ್ಟೇ ಹೇಳಿದರು.</p><p>‘ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇವೆ. ನಾನೇ ಖುದ್ದಾಗಿ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ನಮ್ಮ ಶಾಸಕರೂ ಪ್ರಚಾರ ಮಾಡಿದ್ದಾರೆ’ ಎಂದರು.</p><p>‘ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾರಾದರೂ ಒತ್ತು ಕೊಟ್ಟ ಮುಖ್ಯಮಂತ್ರಿ ಇದ್ದರೆ ಅದು ಕುಮಾರಸ್ವಾಮಿ. 1,600 ಪ್ರೌಢಶಾಲೆ, 600 ಪದವಿಪೂರ್ವ ಕಾಲೇಜು, 250 ಪ್ರಥಮ ದರ್ಜೆ ಕಾಲೇಜು ಕೊಟ್ಟಿದ್ದಾರೆ. ₹7 ಸಾವಿರ ಕೋಟಿ ಅನುದಾನವನ್ನು ಶಾಲಾ-ಕಾಲೇಜು ಕಟ್ಟಡಗಳಿಗೂ ಕೊಟ್ಟಿದ್ದಾರೆ. 4,800 ಶಿಕ್ಷಕರು, 1,600 ಪಿಯುಸಿ ಉಪನ್ಯಾಸಕರನ್ನು ಕುಮಾರಸ್ವಾಮಿ, ಯಡಿಯೂರಪ್ಪ ಇದ್ದಾಗ ನೇಮಕ ಮಾಡಿದ್ದಾರೆ’ ಎಂದು ಹೇಳಿದರು.</p><p>‘ಈಗ ಜೆಡಿಎಸ್-ಬಿಜೆಪಿ ಸೇರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಾಡುತ್ತಿದ್ದೇವೆ. ಎಲ್ಲ ಒಟ್ಟಾಗಿ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಗೆದ್ದೇ ಗೆಲ್ಲುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ಶಾಸಕ ಎಚ್.ಡಿ. ರೇವಣ್ಣ ಭಾನುವಾರ ಹೊಳೆನರಸೀಪುರದ ವಿವಿಧ ದೇಗುಲಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬಕ್ಕೆ ಎದುರಾಗಿರುವ ಸಂಕಷ್ಟಗಳು ದೂರವಾಗಲು ರೇವಣ್ಣ ದೇವರ ಮೊರೆ ಹೋಗಿದ್ದಾರೆ.</p><p>ಬೆಳಿಗ್ಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಅವರು, ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.</p><p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೋತ್ತರ ಸಮೀಕ್ಷಗಳ ಕುರಿತು ಪ್ರತಿಕ್ರಿಯಿಸಿ, ‘ಅದರ ಬಗ್ಗೆ ನಾನು ಇವತ್ತು ಏನೂ ಹೇಳಲ್ಲ. ಈ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಲಕ್ಷ್ಮೀನರಸಿಂಹ ಸ್ವಾಮಿ ಇರುವವರೆಗೂ ನಮಗೇನು ತೊಂದರೆಯಿಲ್ಲ. ಲೋಕಸಭೆ ಚುನಾವಣೆಯ ಮೂರು ಕ್ಷೇತ್ರ ಗೆಲ್ಲುತ್ತೇವೆ’ ಎಂದು ಹೇಳಿದರು.</p><p>ಭವಾನಿ ರೇವಣ್ಣ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದೇನೂ ನನಗೆ ಗೊತ್ತಿಲ್ಲ’ ಎಂದಷ್ಟೇ ಹೇಳಿದರು.</p><p>‘ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇವೆ. ನಾನೇ ಖುದ್ದಾಗಿ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ನಮ್ಮ ಶಾಸಕರೂ ಪ್ರಚಾರ ಮಾಡಿದ್ದಾರೆ’ ಎಂದರು.</p><p>‘ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾರಾದರೂ ಒತ್ತು ಕೊಟ್ಟ ಮುಖ್ಯಮಂತ್ರಿ ಇದ್ದರೆ ಅದು ಕುಮಾರಸ್ವಾಮಿ. 1,600 ಪ್ರೌಢಶಾಲೆ, 600 ಪದವಿಪೂರ್ವ ಕಾಲೇಜು, 250 ಪ್ರಥಮ ದರ್ಜೆ ಕಾಲೇಜು ಕೊಟ್ಟಿದ್ದಾರೆ. ₹7 ಸಾವಿರ ಕೋಟಿ ಅನುದಾನವನ್ನು ಶಾಲಾ-ಕಾಲೇಜು ಕಟ್ಟಡಗಳಿಗೂ ಕೊಟ್ಟಿದ್ದಾರೆ. 4,800 ಶಿಕ್ಷಕರು, 1,600 ಪಿಯುಸಿ ಉಪನ್ಯಾಸಕರನ್ನು ಕುಮಾರಸ್ವಾಮಿ, ಯಡಿಯೂರಪ್ಪ ಇದ್ದಾಗ ನೇಮಕ ಮಾಡಿದ್ದಾರೆ’ ಎಂದು ಹೇಳಿದರು.</p><p>‘ಈಗ ಜೆಡಿಎಸ್-ಬಿಜೆಪಿ ಸೇರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಾಡುತ್ತಿದ್ದೇವೆ. ಎಲ್ಲ ಒಟ್ಟಾಗಿ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಗೆದ್ದೇ ಗೆಲ್ಲುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>