<p><strong>ಬೇಲೂರು: </strong>ಶ್ರೀಚನ್ನಕೇಶವ ದೇವರ ಅಶ್ವಾರೋಹಣೋತ್ಸವ ಮತ್ತು ಸಾಂಪ್ರದಾಯಿಕ ಮೊಲ ಬಿಡುವ ಮೂಲಕ ಬೇಲೂರಿನಲ್ಲಿ ಗುರುವಾರ ಸಂಜೆ ಸಂಕ್ರಾಂತಿ ಆಚರಿಸಲಾಯಿತು.</p>.<p>ದೇವಾಲಯದಿಂದ ಇಲ್ಲಿನ ನೆಹರೂನಗರಕ್ಕೆ ಮಂಗಳ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಉತ್ಸವ ಸಾಗಿ ಹಳೇಬೀಡು ರಸ್ತೆಯಲ್ಲಿ ಹಾಕಲಾಗಿದ್ದ ವಿಶೇಷ ಚಪ್ಪರದವರೆಗೆ ತಲುಪಿತು.</p>.<p>ವಿಜಯನಗರ ಅರಸರ ಕಾಲದಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಆರಂಭವಾದ ಈ ಉತ್ಸವ ಇಂದಿಗೂ ಆಚರಣೆಯಲ್ಲಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ಮೊಲವನ್ನು ಕಾಡಿನಿಂದ ಜೀವಂತವಾಗಿ ಬೇಟೆಯಾಡಿಕೊಂಡು ತಂದು ದೇವರ ಎದುರು ಪೂಜೆ ಸಲ್ಲಿಸಿ ಮತ್ತೆ ಕಾಡಿಗೆ ಬಿಡುವ ಸಂಪ್ರದಾಯ ನಡೆದುಕೊಂಡು ಬಂದಿದೆ.</p>.<p>ಮೊಲವನ್ನು ಬಿಟ್ಟ ನಂತರ ಶ್ರೀಚನ್ನಕೇಶವ ಉತ್ಸವ ಮೂರ್ತಿಯ ಅಶ್ವಾರೋಹಣೋತ್ಸವ ನಡೆಯುತ್ತದೆ.</p>.<p>ಸಮೀಪದ ದೊಡ್ಡಬ್ಯಾಡಿಗೆರೆ ಪರ್ವತಯ್ಯ ಈ ಬಾರಿ ಮೊಲವನ್ನು ಹಿಡಿದು ತಂದಿದ್ದರು. ಪೂಜಾ ಕಾರ್ಯವನ್ನು ಮುಖ್ಯಅರ್ಚಕ ಕೃಷ್ಣಸ್ವಾಮಿಭಟ್, ಶ್ರೀನಿವಾಸ್ಭಟ್ ಇತರೆ ಅರ್ಚಕರ ಸಮೂಹ ನಡೆಸಿದರು.</p>.<p>ದೇಗುಲದ ಕಾರ್ಯ ನಿರ್ವಹಣಾಧಿಕಾರಿ ವಿದ್ಯುಲ್ಲತಾ, ಶಿರಸ್ತೇದಾರ್ ನಾಗರಾಜ್, ಆರ್.ಐ. ಪ್ರಕಾಶ್ ಹಾಗೂ ದೇಗುಲ ಸಮಿತಿಯ ಮಾಜಿ ಸದಸ್ಯರು, ಭಕ್ತರು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>ಶ್ರೀಚನ್ನಕೇಶವ ದೇವರ ಅಶ್ವಾರೋಹಣೋತ್ಸವ ಮತ್ತು ಸಾಂಪ್ರದಾಯಿಕ ಮೊಲ ಬಿಡುವ ಮೂಲಕ ಬೇಲೂರಿನಲ್ಲಿ ಗುರುವಾರ ಸಂಜೆ ಸಂಕ್ರಾಂತಿ ಆಚರಿಸಲಾಯಿತು.</p>.<p>ದೇವಾಲಯದಿಂದ ಇಲ್ಲಿನ ನೆಹರೂನಗರಕ್ಕೆ ಮಂಗಳ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಉತ್ಸವ ಸಾಗಿ ಹಳೇಬೀಡು ರಸ್ತೆಯಲ್ಲಿ ಹಾಕಲಾಗಿದ್ದ ವಿಶೇಷ ಚಪ್ಪರದವರೆಗೆ ತಲುಪಿತು.</p>.<p>ವಿಜಯನಗರ ಅರಸರ ಕಾಲದಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಆರಂಭವಾದ ಈ ಉತ್ಸವ ಇಂದಿಗೂ ಆಚರಣೆಯಲ್ಲಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ಮೊಲವನ್ನು ಕಾಡಿನಿಂದ ಜೀವಂತವಾಗಿ ಬೇಟೆಯಾಡಿಕೊಂಡು ತಂದು ದೇವರ ಎದುರು ಪೂಜೆ ಸಲ್ಲಿಸಿ ಮತ್ತೆ ಕಾಡಿಗೆ ಬಿಡುವ ಸಂಪ್ರದಾಯ ನಡೆದುಕೊಂಡು ಬಂದಿದೆ.</p>.<p>ಮೊಲವನ್ನು ಬಿಟ್ಟ ನಂತರ ಶ್ರೀಚನ್ನಕೇಶವ ಉತ್ಸವ ಮೂರ್ತಿಯ ಅಶ್ವಾರೋಹಣೋತ್ಸವ ನಡೆಯುತ್ತದೆ.</p>.<p>ಸಮೀಪದ ದೊಡ್ಡಬ್ಯಾಡಿಗೆರೆ ಪರ್ವತಯ್ಯ ಈ ಬಾರಿ ಮೊಲವನ್ನು ಹಿಡಿದು ತಂದಿದ್ದರು. ಪೂಜಾ ಕಾರ್ಯವನ್ನು ಮುಖ್ಯಅರ್ಚಕ ಕೃಷ್ಣಸ್ವಾಮಿಭಟ್, ಶ್ರೀನಿವಾಸ್ಭಟ್ ಇತರೆ ಅರ್ಚಕರ ಸಮೂಹ ನಡೆಸಿದರು.</p>.<p>ದೇಗುಲದ ಕಾರ್ಯ ನಿರ್ವಹಣಾಧಿಕಾರಿ ವಿದ್ಯುಲ್ಲತಾ, ಶಿರಸ್ತೇದಾರ್ ನಾಗರಾಜ್, ಆರ್.ಐ. ಪ್ರಕಾಶ್ ಹಾಗೂ ದೇಗುಲ ಸಮಿತಿಯ ಮಾಜಿ ಸದಸ್ಯರು, ಭಕ್ತರು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>