ಸತ್ನಾದಿಂದ 70 ಕಿ.ಮೀ. ದೂರದಲ್ಲಿರುವ ಅಂಜಾರ್ ಗ್ರಾಮದ ಅರಣ್ಯಪ್ರದೇಶದಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ನಾಲ್ವರು, ಸಿರಾಜ್ (45) ಎಂಬುವರನ್ನು ಹೊಡೆದು ಕೊಂದಿದ್ದಾರೆ. ಅಲ್ಲದೆ, ಶಕೀಲ್ (35) ಎಂಬ ಯುವಕನ ಮೇಲೂ ತೀವ್ರ ಹಲ್ಲೆ ನಡೆಸಿದ್ದು, ಅವರನ್ನು ಜಬಲ್ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.