<p><strong>ಹೊಳೆನರಸೀಪುರ</strong>: ಪಟ್ಟಣದ ಅರಕಲಗೂಡು ರಸ್ತೆಯ ಆರ್ಆರ್ಆರ್ ಡಾಬಾ ಮಾಲೀಕ, ಪುರಸಭಾ ಸದಸ್ಯ ಕಿರಣ್ ಅವರ ಮೇಲೆ ಕೆಲವರು ತೀವ್ರವಾಗಿ ಹಲ್ಲೆ ನಡೆಸಿದ್ದು, ಕಣ್ಣು ಮತ್ತು ಕೈಗೆ ತೀವ್ರ ಪೆಟ್ಟಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಭಾನುವಾರ ಸಂಜೆ ವೇಳೆ ನಾನು ಹೋಟೆಲ್ನಲ್ಲಿದ್ದಾಗ ಅಜಿತ್ ಹಾಗೂ ಸಾರಿಗೆ ಸಂಸ್ಥೆ ಚಾಲಕ ಮನೋಹರ್ ಹಾಗೂ ಇನ್ನಿಬ್ಬರು ನಮ್ಮ ಡಾಬಾಗೆ ಊಟಕ್ಕೆ ಬಂದರು. ಬಂದವರು ನನ್ನನ್ನು ಏಕವಚನದಿಂದ ಮಾತನಾಡಿಸುತ್ತಿದ್ದರು. ಈ ಬಗ್ಗೆ ಕೇಳಿದ್ದಕ್ಕೆ ತೀವ್ರವಾಗಿ ಹಲ್ಲೆ ನಡೆಸಿದರು’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.</p>.<p>ದೂರು ದಾಖಲಿಸಿಕೊಂಡ ಪೊಲೀಸರು ಹಲ್ಲೆ ನಡೆಸಿದವರ ವಿರುದ್ದ 307 ಅಡಿಯಲ್ಲಿ ಎಫ್.ಐ.ಆರ್. ದಾಖಲಿಸಿದ್ದಾರೆ.</p>.<p>‘ಪಟ್ಟಣದಲ್ಲಿ ಇತ್ತೀಚೆಗೆ ಕೆಲವರ ಗೂಂಡಾಗಿರಿ ಹೆಚ್ಚಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಕೆಲವು ಪುಂಡರು ಕರ್ಕಶವಾಗಿ ಹಾರ್ನ್ ಮಾಡುತ್ತಾ ಆತಂಕ ಸೃಷ್ಟಿಸುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಪಟ್ಟಣದ ಅರಕಲಗೂಡು ರಸ್ತೆಯ ಆರ್ಆರ್ಆರ್ ಡಾಬಾ ಮಾಲೀಕ, ಪುರಸಭಾ ಸದಸ್ಯ ಕಿರಣ್ ಅವರ ಮೇಲೆ ಕೆಲವರು ತೀವ್ರವಾಗಿ ಹಲ್ಲೆ ನಡೆಸಿದ್ದು, ಕಣ್ಣು ಮತ್ತು ಕೈಗೆ ತೀವ್ರ ಪೆಟ್ಟಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಭಾನುವಾರ ಸಂಜೆ ವೇಳೆ ನಾನು ಹೋಟೆಲ್ನಲ್ಲಿದ್ದಾಗ ಅಜಿತ್ ಹಾಗೂ ಸಾರಿಗೆ ಸಂಸ್ಥೆ ಚಾಲಕ ಮನೋಹರ್ ಹಾಗೂ ಇನ್ನಿಬ್ಬರು ನಮ್ಮ ಡಾಬಾಗೆ ಊಟಕ್ಕೆ ಬಂದರು. ಬಂದವರು ನನ್ನನ್ನು ಏಕವಚನದಿಂದ ಮಾತನಾಡಿಸುತ್ತಿದ್ದರು. ಈ ಬಗ್ಗೆ ಕೇಳಿದ್ದಕ್ಕೆ ತೀವ್ರವಾಗಿ ಹಲ್ಲೆ ನಡೆಸಿದರು’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.</p>.<p>ದೂರು ದಾಖಲಿಸಿಕೊಂಡ ಪೊಲೀಸರು ಹಲ್ಲೆ ನಡೆಸಿದವರ ವಿರುದ್ದ 307 ಅಡಿಯಲ್ಲಿ ಎಫ್.ಐ.ಆರ್. ದಾಖಲಿಸಿದ್ದಾರೆ.</p>.<p>‘ಪಟ್ಟಣದಲ್ಲಿ ಇತ್ತೀಚೆಗೆ ಕೆಲವರ ಗೂಂಡಾಗಿರಿ ಹೆಚ್ಚಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಕೆಲವು ಪುಂಡರು ಕರ್ಕಶವಾಗಿ ಹಾರ್ನ್ ಮಾಡುತ್ತಾ ಆತಂಕ ಸೃಷ್ಟಿಸುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>