ಭೀಮ್ ಆರ್ಮಿ ತಂಡದ ರಾಜ್ಯ ಕಾರ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ ಮಾತನಾಡಿ, ಜಿಲ್ಲೆಯ ನಾಗರಿಕ ಸಮುದಾಯ ತಲೆ ತಗ್ಗಿಸುವಂತಹ ಅಮಾನುಷ ಘಟನೆ ನಡೆದಿದೆ. ಈ ರೀತಿಯ ಘಟನೆಗಳು ಮರುಕಳುಹಿಸುತ್ತಿದ್ದು, ಮಹಿಳೆ ಮತ್ತು ಮಕ್ಕಳು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ₹ 5 ಲಕ್ಷ ಪರಿಹಾರ, ಸಂಪೂರ್ಣ ಶಿಕ್ಷಣ ಮತ್ತು ಸರ್ಕಾರಿ ಕೆಲಸ ಸಿಗುವವರೆಗೆ ಎಲ್ಲ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.