<p><strong>ಹಾಸನ</strong>: ತನ್ನ ತಮ್ಮನನ್ನು ವಿವಾಹವಾಗಲು ಒಪ್ಪದ ಇಬ್ಬರು ಯುವತಿಯರಿಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಯವತಿಯರ ಮಾವ ನಾಗರಾಜ್ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.</p>.<p>ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸೋಮವಾರ ಹಲ್ಲೆ ನಡೆದಿತ್ತು. ಯೋಗಿತಾ (22) ಮತ್ತು ಪುಷ್ಟಿತಾ ತೀವ್ರವಾಗಿ ಗಾಯಗೊಂಡಿದ್ದು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇಬ್ಬರು ಯುವತಿಯರ ತಂದೆ ಇತ್ತೀಚೆಗೆ ನಿಧನರಾಗಿದ್ದರು. ಮನೆಯಲ್ಲಿ ಶುಭ ಕಾರ್ಯ ಮಾಡಬೇಕೆಂದು ಸೋದರ ಮಾವನ ಮನೆಗೆ ಕೆ.ಆರ್.ಪೇಟೆ ತಾಲ್ಲೂಕು ಕಿಕ್ಕೇರಿ ಹೋಬಳಿ ದೊಡ್ಡಕಾರಳ್ಳಿ ಗ್ರಾಮದ ನಾಗರಾಜ್ ತನ್ನ ತಾಯಿ ಹಾಗೂ ಅಜ್ಜಿ ಜತೆಗೆ ಬಂದು ಬಂದು ತಮ್ಮನ ಮದುವೆಯ ಪ್ರಸ್ತಾಪ ಮಾಡಿದ್ದಾನೆ.</p>.<p>‘ಮನೆಯ ಹಿರಿಯ ಮಗಳಾದ ನನ್ನ ಮೇಲೆ ಸಂಸಾರದ ಜವಾಬ್ದಾರಿ ಇದೆ. ಸದ್ಯಕ್ಕೆ ನಾನು ಮದುವೆಯಾಗುವುದಿಲ್ಲ. ತಂಗಿಯನ್ನು ಚೆನ್ನಾಗಿ ಓದಿಸಬೇಕು. ಅಲ್ಲದೆ ಬಿಎಸ್ಸಿ ಓದಿರುವ ನಾನು ನಿನ್ನ ತಮ್ಮನನ್ನು ಮದುವೆ ಆಗುವುದಿಲ್ಲ’ ಎಂದು ಯೋಗಿತಾ ವಿವಾಹ ನಿರಾಕರಿಸಿದ್ದಾಳೆ.</p>.<p>ಅಕ್ಕ ತಂಗಿ ಇಬ್ಬರೂ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಕೋಪಗೊಂಡ ನಾಗರಾಜ್, ಯುವತಿಯರಿಬ್ಬರ ಕೊಲೆಗೆ ಯತ್ನಿಸಿದ್ದಾನೆ. ಹಲ್ಲೆ ಮಾಡಿದ ನಾಗರಾಜ್, ಕುಮ್ಮಕ್ಕು ನೀಡಿದ ಆರೋಪದಲ್ಲಿ ನಾಜರಾಜ್ನ ಅಜ್ಜಿ ಪುಟ್ಟಮ್ಮ, ತಾಯಿ ಅಕ್ಕಮ್ಮ ಅವರನ್ನು ಬಂಧಿಸಲಾಗಿದೆ.</p>.<p>ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ತನ್ನ ತಮ್ಮನನ್ನು ವಿವಾಹವಾಗಲು ಒಪ್ಪದ ಇಬ್ಬರು ಯುವತಿಯರಿಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಯವತಿಯರ ಮಾವ ನಾಗರಾಜ್ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.</p>.<p>ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸೋಮವಾರ ಹಲ್ಲೆ ನಡೆದಿತ್ತು. ಯೋಗಿತಾ (22) ಮತ್ತು ಪುಷ್ಟಿತಾ ತೀವ್ರವಾಗಿ ಗಾಯಗೊಂಡಿದ್ದು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇಬ್ಬರು ಯುವತಿಯರ ತಂದೆ ಇತ್ತೀಚೆಗೆ ನಿಧನರಾಗಿದ್ದರು. ಮನೆಯಲ್ಲಿ ಶುಭ ಕಾರ್ಯ ಮಾಡಬೇಕೆಂದು ಸೋದರ ಮಾವನ ಮನೆಗೆ ಕೆ.ಆರ್.ಪೇಟೆ ತಾಲ್ಲೂಕು ಕಿಕ್ಕೇರಿ ಹೋಬಳಿ ದೊಡ್ಡಕಾರಳ್ಳಿ ಗ್ರಾಮದ ನಾಗರಾಜ್ ತನ್ನ ತಾಯಿ ಹಾಗೂ ಅಜ್ಜಿ ಜತೆಗೆ ಬಂದು ಬಂದು ತಮ್ಮನ ಮದುವೆಯ ಪ್ರಸ್ತಾಪ ಮಾಡಿದ್ದಾನೆ.</p>.<p>‘ಮನೆಯ ಹಿರಿಯ ಮಗಳಾದ ನನ್ನ ಮೇಲೆ ಸಂಸಾರದ ಜವಾಬ್ದಾರಿ ಇದೆ. ಸದ್ಯಕ್ಕೆ ನಾನು ಮದುವೆಯಾಗುವುದಿಲ್ಲ. ತಂಗಿಯನ್ನು ಚೆನ್ನಾಗಿ ಓದಿಸಬೇಕು. ಅಲ್ಲದೆ ಬಿಎಸ್ಸಿ ಓದಿರುವ ನಾನು ನಿನ್ನ ತಮ್ಮನನ್ನು ಮದುವೆ ಆಗುವುದಿಲ್ಲ’ ಎಂದು ಯೋಗಿತಾ ವಿವಾಹ ನಿರಾಕರಿಸಿದ್ದಾಳೆ.</p>.<p>ಅಕ್ಕ ತಂಗಿ ಇಬ್ಬರೂ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಕೋಪಗೊಂಡ ನಾಗರಾಜ್, ಯುವತಿಯರಿಬ್ಬರ ಕೊಲೆಗೆ ಯತ್ನಿಸಿದ್ದಾನೆ. ಹಲ್ಲೆ ಮಾಡಿದ ನಾಗರಾಜ್, ಕುಮ್ಮಕ್ಕು ನೀಡಿದ ಆರೋಪದಲ್ಲಿ ನಾಜರಾಜ್ನ ಅಜ್ಜಿ ಪುಟ್ಟಮ್ಮ, ತಾಯಿ ಅಕ್ಕಮ್ಮ ಅವರನ್ನು ಬಂಧಿಸಲಾಗಿದೆ.</p>.<p>ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>