‘ಗ್ರಾಮದ ಸರ್ವೇ ನಂಬರ್ 101ರಲ್ಲಿ ಮೂರು ಎಕರೆ ಭೂಮಿಯಿದೆ. ಇದರಲ್ಲಿ 1.70 ಎಕರೆ ಒತ್ತುವರಿಯಾಗಿದೆ. ಉಳಿದ 1.30 ಎಕರೆ ಭೂಮಿಯಲ್ಲಿ ಸ್ಮಶಾನ, ಸಮುದಾಯ ಭವನ, ದೇಗುಲ, ಅಂಗನವಾಡಿ ನಿರ್ಮಾಣಕ್ಕೆ ಗ್ರಾಮದ ಪ್ರತಿಯೊಂದು ಕುಟುಂಬದಿಂದ ₹500 ರಿಂದ ₹2 ಸಾವಿರದವರಗೆ ಹಣ ಸಂಗ್ರಹಿಸಿದ್ದೆವು. ಆದರೆ, ಕೆಲವರು ನಮಗೆ ತಿಳಿಯದಂತೆ ಮೋಸ ಮಾಡಿ ತಮ್ಮ ಹೆಸರಿಗೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದುಮೋಹನ್ರಾಜ್ ಆರೋಪಿಸಿದರು.