<p><strong>ಬೇಲೂರು: </strong>‘ಗ್ರಾಮದ ಕಂದಾಯ ಇಲಾಖೆಗೆ ಸೇರಿದ ಭೂಮಿಯನ್ನು ರಕ್ಷಿಸಲು ಮುಂದಾದ ನಮಗೆ ಕೆಲವರು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಗಂಡ–ಹೆಂಡತಿ ಇಬ್ಬರೂ ಪಟ್ಟಣದ ನೆಹರೂನಗರದಲ್ಲಿ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿ ಕೆಲ ಕಾಲ ಆತಂಕ ಸೃಷ್ಟಿಸಿದರು.</p>.<p>ತಾಲ್ಲೂಕಿನ ದೇವರಾಜಪುರದ ಮೋಹನ್ರಾಜ್ ಮತ್ತು ಚಂದನ ದಂಪತಿ ಶುಕ್ರವಾರ ಮುಂಜಾನೆ ಟವರ್ ಏರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೇದರಿಕೆ ಹಾಕಿದರು.</p>.<p>‘ಗ್ರಾಮದ ಸರ್ವೇ ನಂಬರ್ 101ರಲ್ಲಿ ಮೂರು ಎಕರೆ ಭೂಮಿಯಿದೆ. ಇದರಲ್ಲಿ 1.70 ಎಕರೆ ಒತ್ತುವರಿಯಾಗಿದೆ. ಉಳಿದ 1.30 ಎಕರೆ ಭೂಮಿಯಲ್ಲಿ ಸ್ಮಶಾನ, ಸಮುದಾಯ ಭವನ, ದೇಗುಲ, ಅಂಗನವಾಡಿ ನಿರ್ಮಾಣಕ್ಕೆ ಗ್ರಾಮದ ಪ್ರತಿಯೊಂದು ಕುಟುಂಬದಿಂದ ₹500 ರಿಂದ ₹2 ಸಾವಿರದವರಗೆ ಹಣ ಸಂಗ್ರಹಿಸಿದ್ದೆವು. ಆದರೆ, ಕೆಲವರು ನಮಗೆ ತಿಳಿಯದಂತೆ ಮೋಸ ಮಾಡಿ ತಮ್ಮ ಹೆಸರಿಗೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದುಮೋಹನ್ರಾಜ್ ಆರೋಪಿಸಿದರು.</p>.<p>‘ಸ್ಥಳದಲ್ಲಿ ಮನೆಯನ್ನೂ ಅಕ್ರಮವಾಗಿ ಕಟ್ಟಿಕೊಂಡಿದ್ದರು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರಿಂದ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಅಧಿಕಾರಿಗಳು ಆ ಮನೆ ಕೆಡವಿಸಿದರು. ಇದರಿಂದ ಸಿಟ್ಟಾಗಿ ಅವರು ನಮ್ಮ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ. ನಮಗೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ತಹಶಿಲ್ದಾರ್ ಎನ್.ವಿ.ನಟೇಶ್, ಟವರ್ ಮೇಲಿದ್ದ ಮೋಹನ್ರಾಜ್ಗೆ ದೂರವಾಣಿ ಕರೆ ಮಾಡಿ ಮಾತನಾಡಿ, ‘ಸರ್ಕಾರಿ ಭೂಮಿಯನ್ನು ಗ್ರಾಮದ ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಭರವಸೆ ನೀಡಿ, ಮನವೊಲಿಸಿದ ನಂತರ ದಂಪತಿ ಟವರ್ ಮೇಲಿಂದ ಕೆಳಗೆ ಇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>‘ಗ್ರಾಮದ ಕಂದಾಯ ಇಲಾಖೆಗೆ ಸೇರಿದ ಭೂಮಿಯನ್ನು ರಕ್ಷಿಸಲು ಮುಂದಾದ ನಮಗೆ ಕೆಲವರು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಗಂಡ–ಹೆಂಡತಿ ಇಬ್ಬರೂ ಪಟ್ಟಣದ ನೆಹರೂನಗರದಲ್ಲಿ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿ ಕೆಲ ಕಾಲ ಆತಂಕ ಸೃಷ್ಟಿಸಿದರು.</p>.<p>ತಾಲ್ಲೂಕಿನ ದೇವರಾಜಪುರದ ಮೋಹನ್ರಾಜ್ ಮತ್ತು ಚಂದನ ದಂಪತಿ ಶುಕ್ರವಾರ ಮುಂಜಾನೆ ಟವರ್ ಏರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೇದರಿಕೆ ಹಾಕಿದರು.</p>.<p>‘ಗ್ರಾಮದ ಸರ್ವೇ ನಂಬರ್ 101ರಲ್ಲಿ ಮೂರು ಎಕರೆ ಭೂಮಿಯಿದೆ. ಇದರಲ್ಲಿ 1.70 ಎಕರೆ ಒತ್ತುವರಿಯಾಗಿದೆ. ಉಳಿದ 1.30 ಎಕರೆ ಭೂಮಿಯಲ್ಲಿ ಸ್ಮಶಾನ, ಸಮುದಾಯ ಭವನ, ದೇಗುಲ, ಅಂಗನವಾಡಿ ನಿರ್ಮಾಣಕ್ಕೆ ಗ್ರಾಮದ ಪ್ರತಿಯೊಂದು ಕುಟುಂಬದಿಂದ ₹500 ರಿಂದ ₹2 ಸಾವಿರದವರಗೆ ಹಣ ಸಂಗ್ರಹಿಸಿದ್ದೆವು. ಆದರೆ, ಕೆಲವರು ನಮಗೆ ತಿಳಿಯದಂತೆ ಮೋಸ ಮಾಡಿ ತಮ್ಮ ಹೆಸರಿಗೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದುಮೋಹನ್ರಾಜ್ ಆರೋಪಿಸಿದರು.</p>.<p>‘ಸ್ಥಳದಲ್ಲಿ ಮನೆಯನ್ನೂ ಅಕ್ರಮವಾಗಿ ಕಟ್ಟಿಕೊಂಡಿದ್ದರು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರಿಂದ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಅಧಿಕಾರಿಗಳು ಆ ಮನೆ ಕೆಡವಿಸಿದರು. ಇದರಿಂದ ಸಿಟ್ಟಾಗಿ ಅವರು ನಮ್ಮ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ. ನಮಗೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ತಹಶಿಲ್ದಾರ್ ಎನ್.ವಿ.ನಟೇಶ್, ಟವರ್ ಮೇಲಿದ್ದ ಮೋಹನ್ರಾಜ್ಗೆ ದೂರವಾಣಿ ಕರೆ ಮಾಡಿ ಮಾತನಾಡಿ, ‘ಸರ್ಕಾರಿ ಭೂಮಿಯನ್ನು ಗ್ರಾಮದ ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಭರವಸೆ ನೀಡಿ, ಮನವೊಲಿಸಿದ ನಂತರ ದಂಪತಿ ಟವರ್ ಮೇಲಿಂದ ಕೆಳಗೆ ಇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>