ಸಿಸಿಟಿವಿ ಕ್ಯಾಮೆರಾಕ್ಕೆ ಅವಡಿಸಲು ಒತ್ತಾಯ: ದೇವಾಲಯವು ಇತ್ತೀಚೆಗೆ ಜೀರ್ಣೋದ್ಧಾರಗೊಂಡು 2 ವರ್ಷಗಳ ನಂತರ ಭಕ್ತರು ಮತ್ತು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ದೊರೆಯುತ್ತಿರುವುದರಿಂದ ಹುಂಡಿಯಲ್ಲಿ ಹಣ ಜಾಸ್ತಿ ಇರಬಹುದು ಎಂದು ಭಾವಿಸಿ ಕಳ್ಳರು ಅಗಿಂದಾಗ್ಗೆ ದೇವಾಲಯದ ಬೀಗ ಒಡೆದು ಕಳ್ಳತನ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಸಂಬಂಧಿಸಿದ ಮುಜುರಾಯಿ ಇಲಾಖೆ, ಜಿಲ್ಲಾಧಿಕಾರಿಗಳು, ಮೈಸೂರು ಪ್ರಾಚ್ಯವಸ್ತು ಇಲಾಖೆಯವರು ದೇವಾಲಯಕ್ಕೆ ಉತ್ತಮ ಗುಣಮಟ್ಟದ. 8ರಿಂದ 10 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.