<p><strong>ಹಾಸನ:</strong> ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪ್ರವೇಶ ಪಡೆದಿದ್ದಾರೆ. ಕೊರೊನಾ ಲಾಕ್ಡೌನ್ ತಂದಿಟ್ಟ ಆರ್ಥಿಕ ಸಂಕಷ್ಟದಿಂದಾಗಿ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಅಂದಾಜು ಮೂರು ಸಾವಿರ ಮಕ್ಕಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಂಕಿ ಅಂಶ ಪ್ರಕಾರ ಆಗಸ್ಟ್ 31ರವರೆಗೆ ಎಲ್ಕೆಜಿ ಯಿಂದ ಹತ್ತನೇ ತರಗತಿವರೆಗೆ 1,63,000 ಮಕ್ಕಳ ದಾಖಲಾತಿ ಆಗಿದೆ. ಈ ಪೈಕಿ ಸರ್ಕಾರಿ ಶಾಲೆಗೆ 77,661 , ಅನುದಾನಿತ ಶಾಲೆಗೆ 21,285 , ಅನುದಾನ ರಹಿತ ಶಾಲೆಗೆ 57,432 ಮಕ್ಕಳು ದಾಖಲಾಗಿದ್ದಾರೆ.</p>.<p>ಒಂದನೇ ತರಗತಿಗೆ ದಾಖಲಾಗಿರುವ 8,382 ಮಕ್ಕಳ ಪೈಕಿ ಸರ್ಕಾರಿ ಶಾಲೆಗೆ 5,393, ಅನುದಾನಿತ ಶಾಲೆಗೆ 577, ಅನುದಾನ ರಹಿತ ಶಾಲೆಗೆ 2,412 ಮಕ್ಕಳು ಸೇರ್ಪಡೆಯಾಗಿದ್ದಾರೆ. ಈ ಬಾರಿ ಅಂದಾಜು 3 ಸಾವಿರ ಮಕ್ಕಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ಬಂದಿದ್ದಾರೆ.</p>.<p>ಖಾಸಗಿ ಶಾಲೆಗಳ ಮೇಲೆ ಒಲವಿದ್ದರೂ ಹಲವು ಕಾರಣಗಳಿಂದ ಪಾಲಕರು ತಮ್ಮ ನಿರ್ಧಾರ ಬದಲಿಸಿದ್ದಾರೆ. ಶಾಲೆಗಳು<br />ಇನ್ನೂ ಆರಂಭಗೊಂಡಿಲ್ಲ. ಖಾಸಗಿ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಹಲವರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ದುಬಾರಿ ಶುಲ್ಕ ಪಾವತಿಸಿ ಮಕ್ಕಳನ್ನು ಓದಿಸುವುದು ಹೊರೆಯಾಗಿದೆ.</p>.<p>ಅಲ್ಲದೇ, ಖಾಸಗಿ ಶಾಲೆಗಳಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯವಾದ ಮೊಬೈಲ್ ಇಲ್ಲದಿರುವುದು, ಹಳ್ಳಿಗಳಲ್ಲಿ ಇಂಟರ್ನೆಟ್ , ನೆಟ್ವರ್ಕ್ ಸಮಸ್ಯೆ ಸಹ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಕರೆ ತರುತ್ತಿವೆ.</p>.<p>ಜತೆಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಮನೆ ಬಾಗಿಲಿಗೆ ಬಂದು ಪಾಠ ಮಾಡುತ್ತಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಕ್ಕಳು ದೂರದ ಖಾಸಗಿ ಶಾಲೆಗಳಲ್ಲಿ ಓದುವ ಬದಲು ಹತ್ತಿರದ ಶಾಲೆಗಳಲ್ಲಿ ಓದಲಿ ಎಂಬುದು ಪೋಷಕರ ನಿಲುವಾಗಿದೆ.</p>.<p>ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶುಲ್ಕ ಪಾವತಿಸುವಂತೆ ಪೋಷಕರಿಗೆ ಸೂಚಿಸುತ್ತಿವೆ. ದುಬಾರಿ ಶುಲ್ಕ ಕೊಟ್ಟು ಖಾಸಗಿ ಶಾಲೆಗೆ ಸೇರಿಸಿದರೂ ಈ ವರ್ಷ ತರಗತಿ ನಡೆಯುವುದೇ ಅನುಮಾನ ಎಂಬ ಸ್ಥಿತಿ ಇರುವುದರಿಂದ ಹಲವರು ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ.</p>.<p>‘ಕೊರೊನಾ ಲಾಕ್ಡೌನ್ದಿಂದ ಉದ್ಯೋಗ ಕಳೆದುಕೊಂಡು, ವ್ಯವಹಾರದಲ್ಲಿ ನಷ್ಟ ಅನುಭವಿಸಿ ಸಾವಿರಾರು<br />ಕುಟುಂಬಗಳು ಹಳ್ಳಿಗಳನ್ನು ಸೇರಿವೆ. ಆರ್ಥಿಕ ಸಮಸ್ಯೆ ಉಂಟಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಸೌಲಭ್ಯ<br />ನೀಡಲಾಗುತ್ತಿದೆ. ವಿದ್ಯಾಗಮ ಕಾರ್ಯಕ್ರಮದ ಅಡಿ ಮನೆ ಬಾಗಿಲಿಗೆ ತೆರಳಿ ಪಾಠ ಹೇಳುತ್ತಿದ್ದೇವೆ. ವಠಾರ ಶಾಲೆ ಮೂಲಕ ಕಲಿಕೆ ನಡೆಯುತ್ತಿದೆ. ಚಂದನವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ಮೂಲಕ ಕಲಿಕಾ ಬೋಧನಾ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಕಾರಣಗಳಿಂದ ದಾಖಲಾತಿ ಏರಿಕೆಯಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್.ಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉಚಿತ ಉಪಹಾರ, ಬೈಸಿಕಲ್, ಸಮವಸ್ತ್ರ, ಪುಸ್ತಕ ನೀಡಲಾಗುತ್ತಿದೆ. ಕಳೆದ ವರ್ಷವೇ 39 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೂ ಸೇರಿಸಬಹುದು’ ಎಂದರು.</p>.<p>‘ವಿದ್ಯಾಗಮ ಕಾರ್ಯಕ್ರಮದಡಿ ಶಿಕ್ಷಕರು ಮನೆಗೆ ಬಾಗಿಲಿಗೆ ಬಂದು ಪಾಠ ಮಾಡುತ್ತಿರುವುದರಿಂದ ಮಕ್ಕಳ ಸುರಕ್ಷತೆ ಜತೆಗೆ ಉತ್ತಮ ಕಲಿಕೆಯೂ ಸರ್ಕಾರಿ ಶಾಲೆಗಳಲ್ಲಿ ಸಾಧ್ಯ ಎಂಬ ಭರವಸೆ ಪಾಲಕರಲ್ಲಿ ಮೂಡುತ್ತಿದೆ. ಹಾಸನ ತಾಲ್ಲೂಕಿನ ಶ್ರೀರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಾಲ್ಕು ಮಕ್ಕಳು ಸೇರ್ಪಡೆಯಾಗಿದ್ದಾರೆ. ಈ ತಿಂಗಳ ಅಂತ್ಯದವರೆಗೆ ಪ್ರವೇಶ ಇರುವುದರಿಂದ ಇನ್ನಷ್ಟು ಮಕ್ಕಳು ಸೇರುವ ಸಾಧ್ಯತೆ ಇದೆ’ ಎಂದು ಶಿಕ್ಷಕ ಪರಮೇಶ್ ಹೇಳಿದರು.</p>.<p>‘ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದುಬಾರಿ ಶುಲ್ಕ ಪಾವತಿಸುವ ಬದಲು ಶ್ರೀರಾಂಪುರ ಸರ್ಕಾರಿ ಶಾಲೆಯ 1 ಮತ್ತು 2ನೇ ತರಗತಿಗೆ ನಮ್ಮ ಇಬ್ಬರು ಮಕ್ಕಳನ್ನು ಸೇರಿಸಿದ್ದೇವೆ. ಉಚಿತವಾಗಿ ಸೌಲಭ್ಯಗಳೂ ಸಿಗಲಿವೆ’ಎಂದು ಪೋಷಕರಾದ ಉಮೇಶ್, ಶೃತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪ್ರವೇಶ ಪಡೆದಿದ್ದಾರೆ. ಕೊರೊನಾ ಲಾಕ್ಡೌನ್ ತಂದಿಟ್ಟ ಆರ್ಥಿಕ ಸಂಕಷ್ಟದಿಂದಾಗಿ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಅಂದಾಜು ಮೂರು ಸಾವಿರ ಮಕ್ಕಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಂಕಿ ಅಂಶ ಪ್ರಕಾರ ಆಗಸ್ಟ್ 31ರವರೆಗೆ ಎಲ್ಕೆಜಿ ಯಿಂದ ಹತ್ತನೇ ತರಗತಿವರೆಗೆ 1,63,000 ಮಕ್ಕಳ ದಾಖಲಾತಿ ಆಗಿದೆ. ಈ ಪೈಕಿ ಸರ್ಕಾರಿ ಶಾಲೆಗೆ 77,661 , ಅನುದಾನಿತ ಶಾಲೆಗೆ 21,285 , ಅನುದಾನ ರಹಿತ ಶಾಲೆಗೆ 57,432 ಮಕ್ಕಳು ದಾಖಲಾಗಿದ್ದಾರೆ.</p>.<p>ಒಂದನೇ ತರಗತಿಗೆ ದಾಖಲಾಗಿರುವ 8,382 ಮಕ್ಕಳ ಪೈಕಿ ಸರ್ಕಾರಿ ಶಾಲೆಗೆ 5,393, ಅನುದಾನಿತ ಶಾಲೆಗೆ 577, ಅನುದಾನ ರಹಿತ ಶಾಲೆಗೆ 2,412 ಮಕ್ಕಳು ಸೇರ್ಪಡೆಯಾಗಿದ್ದಾರೆ. ಈ ಬಾರಿ ಅಂದಾಜು 3 ಸಾವಿರ ಮಕ್ಕಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ಬಂದಿದ್ದಾರೆ.</p>.<p>ಖಾಸಗಿ ಶಾಲೆಗಳ ಮೇಲೆ ಒಲವಿದ್ದರೂ ಹಲವು ಕಾರಣಗಳಿಂದ ಪಾಲಕರು ತಮ್ಮ ನಿರ್ಧಾರ ಬದಲಿಸಿದ್ದಾರೆ. ಶಾಲೆಗಳು<br />ಇನ್ನೂ ಆರಂಭಗೊಂಡಿಲ್ಲ. ಖಾಸಗಿ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಹಲವರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ದುಬಾರಿ ಶುಲ್ಕ ಪಾವತಿಸಿ ಮಕ್ಕಳನ್ನು ಓದಿಸುವುದು ಹೊರೆಯಾಗಿದೆ.</p>.<p>ಅಲ್ಲದೇ, ಖಾಸಗಿ ಶಾಲೆಗಳಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯವಾದ ಮೊಬೈಲ್ ಇಲ್ಲದಿರುವುದು, ಹಳ್ಳಿಗಳಲ್ಲಿ ಇಂಟರ್ನೆಟ್ , ನೆಟ್ವರ್ಕ್ ಸಮಸ್ಯೆ ಸಹ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಕರೆ ತರುತ್ತಿವೆ.</p>.<p>ಜತೆಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಮನೆ ಬಾಗಿಲಿಗೆ ಬಂದು ಪಾಠ ಮಾಡುತ್ತಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಕ್ಕಳು ದೂರದ ಖಾಸಗಿ ಶಾಲೆಗಳಲ್ಲಿ ಓದುವ ಬದಲು ಹತ್ತಿರದ ಶಾಲೆಗಳಲ್ಲಿ ಓದಲಿ ಎಂಬುದು ಪೋಷಕರ ನಿಲುವಾಗಿದೆ.</p>.<p>ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶುಲ್ಕ ಪಾವತಿಸುವಂತೆ ಪೋಷಕರಿಗೆ ಸೂಚಿಸುತ್ತಿವೆ. ದುಬಾರಿ ಶುಲ್ಕ ಕೊಟ್ಟು ಖಾಸಗಿ ಶಾಲೆಗೆ ಸೇರಿಸಿದರೂ ಈ ವರ್ಷ ತರಗತಿ ನಡೆಯುವುದೇ ಅನುಮಾನ ಎಂಬ ಸ್ಥಿತಿ ಇರುವುದರಿಂದ ಹಲವರು ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ.</p>.<p>‘ಕೊರೊನಾ ಲಾಕ್ಡೌನ್ದಿಂದ ಉದ್ಯೋಗ ಕಳೆದುಕೊಂಡು, ವ್ಯವಹಾರದಲ್ಲಿ ನಷ್ಟ ಅನುಭವಿಸಿ ಸಾವಿರಾರು<br />ಕುಟುಂಬಗಳು ಹಳ್ಳಿಗಳನ್ನು ಸೇರಿವೆ. ಆರ್ಥಿಕ ಸಮಸ್ಯೆ ಉಂಟಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಸೌಲಭ್ಯ<br />ನೀಡಲಾಗುತ್ತಿದೆ. ವಿದ್ಯಾಗಮ ಕಾರ್ಯಕ್ರಮದ ಅಡಿ ಮನೆ ಬಾಗಿಲಿಗೆ ತೆರಳಿ ಪಾಠ ಹೇಳುತ್ತಿದ್ದೇವೆ. ವಠಾರ ಶಾಲೆ ಮೂಲಕ ಕಲಿಕೆ ನಡೆಯುತ್ತಿದೆ. ಚಂದನವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ಮೂಲಕ ಕಲಿಕಾ ಬೋಧನಾ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಕಾರಣಗಳಿಂದ ದಾಖಲಾತಿ ಏರಿಕೆಯಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್.ಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉಚಿತ ಉಪಹಾರ, ಬೈಸಿಕಲ್, ಸಮವಸ್ತ್ರ, ಪುಸ್ತಕ ನೀಡಲಾಗುತ್ತಿದೆ. ಕಳೆದ ವರ್ಷವೇ 39 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೂ ಸೇರಿಸಬಹುದು’ ಎಂದರು.</p>.<p>‘ವಿದ್ಯಾಗಮ ಕಾರ್ಯಕ್ರಮದಡಿ ಶಿಕ್ಷಕರು ಮನೆಗೆ ಬಾಗಿಲಿಗೆ ಬಂದು ಪಾಠ ಮಾಡುತ್ತಿರುವುದರಿಂದ ಮಕ್ಕಳ ಸುರಕ್ಷತೆ ಜತೆಗೆ ಉತ್ತಮ ಕಲಿಕೆಯೂ ಸರ್ಕಾರಿ ಶಾಲೆಗಳಲ್ಲಿ ಸಾಧ್ಯ ಎಂಬ ಭರವಸೆ ಪಾಲಕರಲ್ಲಿ ಮೂಡುತ್ತಿದೆ. ಹಾಸನ ತಾಲ್ಲೂಕಿನ ಶ್ರೀರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಾಲ್ಕು ಮಕ್ಕಳು ಸೇರ್ಪಡೆಯಾಗಿದ್ದಾರೆ. ಈ ತಿಂಗಳ ಅಂತ್ಯದವರೆಗೆ ಪ್ರವೇಶ ಇರುವುದರಿಂದ ಇನ್ನಷ್ಟು ಮಕ್ಕಳು ಸೇರುವ ಸಾಧ್ಯತೆ ಇದೆ’ ಎಂದು ಶಿಕ್ಷಕ ಪರಮೇಶ್ ಹೇಳಿದರು.</p>.<p>‘ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದುಬಾರಿ ಶುಲ್ಕ ಪಾವತಿಸುವ ಬದಲು ಶ್ರೀರಾಂಪುರ ಸರ್ಕಾರಿ ಶಾಲೆಯ 1 ಮತ್ತು 2ನೇ ತರಗತಿಗೆ ನಮ್ಮ ಇಬ್ಬರು ಮಕ್ಕಳನ್ನು ಸೇರಿಸಿದ್ದೇವೆ. ಉಚಿತವಾಗಿ ಸೌಲಭ್ಯಗಳೂ ಸಿಗಲಿವೆ’ಎಂದು ಪೋಷಕರಾದ ಉಮೇಶ್, ಶೃತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>