<p><strong>ಹಾಸನ:</strong> ರಾಜ್ಯ ಹಣಕಾಸು ಆಯೋಗ ಮತ್ತು ಮಹಾನಗರಪಾಲಿಕೆ ಅನುದಾನದ ಅಡಿಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ಶಾಸಕ ಸ್ವರೂಪ್ ಪ್ರಕಾಶ್ ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಅಂಗವಿಕಲರಿಗೆ ರಾಜ್ಯ ಹಣಕಾಸು ಆಯೋಗ ಹಾಗೂ ಮಹಾನಗರ ಪಾಲಿಕೆ ಅಡಿಯಲ್ಲಿ ಹಣವನ್ನು ಕಾಯ್ದಿರಿಸಿ ತ್ರಿ ಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.</p>.<p>ವಿವಿಧ ಕಾರಣಗಳಿಂದ ಅಂಗಾಂಗ ಕಳೆದುಕೊಂಡಿರುವ ಮಹಿಳೆಯರು ಹಾಗೂ ಪುರುಷರು ಕೂಡ ಇಂದು ಸಣ್ಣ ಪುಟ್ಟ ಕೆಲಸಗಳು ಹಾಗೂ ಉದ್ಯಮಗಳನ್ನು ನಡೆಸಿಕೊಂಡು ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಓಡಾಡಲು ತ್ರಿಚಕ್ರ ವಾಹನಗಳು ಅನುಕೂಲವಾಗಲಿದ್ದು, ಬದುಕು ಕಟ್ಟಿಕೊಳ್ಳಲು ಸಹಾಯಕವಾಗಲಿದೆ ಎಂದರು.</p>.<p>ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಬ್ಯಾಂಕ್ನಲ್ಲಿ ಕೂಡ ಅಂಗವಿಕಲರಿಗೆ ವಿವಿಧ ಉದ್ಯಮಕ್ಕೆ ಸಾಲ ಸೌಲಭ್ಯವೂ ಲಭ್ಯವಿದೆ. ಅವುಗಳನ್ನು ಬಳಸಿಕೊಂಡು ತಾವು ಕೂಡ ಎಲ್ಲರಂತೆ ಆರ್ಥಿಕ, ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು ಎಂದು ಸಲಹೆ ನೀಡಿದರು.</p>.<p>ಮೇಯರ್ ಚಂದ್ರಗೌಡ ಮಾತನಾಡಿ, 19 ತ್ರಿಚಕ್ರ ವಾಹನಗಳನ್ನು ನೀಡಲಾಗಿದೆ. ಇದನ್ನು ಮಂಜೂರು ಮಾಡಿಕೊಟ್ಟ ಸರ್ಕಾರ ಹಾಗೂ ಸಹಕಾರ ನೀಡಿದ ಜನಪ್ರತಿನಿಧಿಗಳಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.</p>.<p>ಉಪ ಮೇಯರ್ ಹೇಮಲತಾ, ಆಯುಕ್ತ ಕೃಷ್ಣಮೂರ್ತಿ, ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ರಾಜ್ಯ ಹಣಕಾಸು ಆಯೋಗ ಮತ್ತು ಮಹಾನಗರಪಾಲಿಕೆ ಅನುದಾನದ ಅಡಿಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ಶಾಸಕ ಸ್ವರೂಪ್ ಪ್ರಕಾಶ್ ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಅಂಗವಿಕಲರಿಗೆ ರಾಜ್ಯ ಹಣಕಾಸು ಆಯೋಗ ಹಾಗೂ ಮಹಾನಗರ ಪಾಲಿಕೆ ಅಡಿಯಲ್ಲಿ ಹಣವನ್ನು ಕಾಯ್ದಿರಿಸಿ ತ್ರಿ ಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.</p>.<p>ವಿವಿಧ ಕಾರಣಗಳಿಂದ ಅಂಗಾಂಗ ಕಳೆದುಕೊಂಡಿರುವ ಮಹಿಳೆಯರು ಹಾಗೂ ಪುರುಷರು ಕೂಡ ಇಂದು ಸಣ್ಣ ಪುಟ್ಟ ಕೆಲಸಗಳು ಹಾಗೂ ಉದ್ಯಮಗಳನ್ನು ನಡೆಸಿಕೊಂಡು ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಓಡಾಡಲು ತ್ರಿಚಕ್ರ ವಾಹನಗಳು ಅನುಕೂಲವಾಗಲಿದ್ದು, ಬದುಕು ಕಟ್ಟಿಕೊಳ್ಳಲು ಸಹಾಯಕವಾಗಲಿದೆ ಎಂದರು.</p>.<p>ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಬ್ಯಾಂಕ್ನಲ್ಲಿ ಕೂಡ ಅಂಗವಿಕಲರಿಗೆ ವಿವಿಧ ಉದ್ಯಮಕ್ಕೆ ಸಾಲ ಸೌಲಭ್ಯವೂ ಲಭ್ಯವಿದೆ. ಅವುಗಳನ್ನು ಬಳಸಿಕೊಂಡು ತಾವು ಕೂಡ ಎಲ್ಲರಂತೆ ಆರ್ಥಿಕ, ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು ಎಂದು ಸಲಹೆ ನೀಡಿದರು.</p>.<p>ಮೇಯರ್ ಚಂದ್ರಗೌಡ ಮಾತನಾಡಿ, 19 ತ್ರಿಚಕ್ರ ವಾಹನಗಳನ್ನು ನೀಡಲಾಗಿದೆ. ಇದನ್ನು ಮಂಜೂರು ಮಾಡಿಕೊಟ್ಟ ಸರ್ಕಾರ ಹಾಗೂ ಸಹಕಾರ ನೀಡಿದ ಜನಪ್ರತಿನಿಧಿಗಳಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.</p>.<p>ಉಪ ಮೇಯರ್ ಹೇಮಲತಾ, ಆಯುಕ್ತ ಕೃಷ್ಣಮೂರ್ತಿ, ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>