<p><strong>ಹಾಸನ:</strong> ವಿಜಯದಶಮಿ ಹಾಗೂ ಆಯುಧ ಪೂಜೆ ಹಬ್ಬದ ಮುನ್ನಾ ದಿನವಾದ ಮಂಗಳವಾರ, ಬೆಲೆ ಏರಿಕೆ ನಡುವೆಯೂ ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯಿತು.</p>.<p>ವಿಶೇಷವಾಗಿ ಆಯುಧ ಪೂಜೆಗೆ ಎಲ್ಲರೂ ಬಳಸುವ ಕುಂಬಳಕಾಯಿ, ಹೂವಿನ ಹಾರ, ಪೂಜಾ ಸಾಮಗ್ರಿ ಸೇರಿದಂತೆ ವಾಹನಗಳಿಗೆ ಅಲಂಕಾರ ಮಾಡುವ ಬಾಳೆಕಂದು, ಮಾವಿನ ಸೊಪ್ಪು, ಕಬ್ಬಿನ ಜಲ್ಲೆ ಸೇರಿದಂತೆ ಇತರೆ ಆಲಂಕಾರಿಕ ವಸ್ತುಗಳ ಖರೀದಿಗೆ ಸಾವಿರಾರು ಮಂದಿ ಮುಗಿಬಿದ್ದಿದ್ದರು.</p>.<p>ಹೂವಿನ ದರವಂತೂ ಕಳೆದ ಬಾರಿಗಿಂತ ಅಧಿಕವಾಗಿತ್ತು. ನಗರದ ಕಟ್ಟಿನಕೆರೆ ಮಾರುಕಟ್ಟೆ, ಮಹಾವೀರ ವೃತ್ತ, ಡೈರಿ ವೃತ್ತ, ಸಾಲಿಗಾಮೆ ರಸ್ತೆ, ಸಂತೆಪೇಟೆ ವೃತ್ತ, ಬಡಾವಣೆಗಳ ಪ್ರಮುಖ ವೃತ್ತಗಳಲ್ಲಿ, ಸಂತೆಪೇಟೆ ರಸ್ತೆಯ ಉದ್ದಕ್ಕೂ ಕುಂಬಳಕಾಯಿ ಹೂವು ಸೇರಿದಂತೆ ಇತರೆ ವಸ್ತುಗಳ ಮಾರಾಟ ಜೋರಾಗಿತ್ತು .</p>.<p>ಒಮ್ಮೆಲೇ ಸಾವಿರಾರು ಜನ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರಿಂದ ಹಲವು ವೃತ್ತ ಮತ್ತು ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.</p>.<p>ವಾಣಿಜ್ಯ ಮಳಿಗೆಯ ಮಾಲೀಕರು ಅಂಗಡಿ ಸ್ವಚ್ಛತೆಯಲ್ಲಿ ತೊಡಗಿದ್ದರು. ವಾಹನ ಮಾಲೀಕರು, ತಮ್ಮ ಮನೆಗಳಲ್ಲಿ ಹಾಗೂ ಖಾಸಗಿ ಆಟೋ ವರ್ಕ್ಸ್ನಲ್ಲಿ ವಾಹನಗಳನ್ನು ಸ್ವಚ್ಛಗೊಳಿಸುತ್ತಿರುವ ಹಾಗೂ ಅಂಗಡಿಗೆ ದೀಪಾಲಂಕಾರ ಮಾಡಿರುವ ದೃಶ್ಯಗಳು ಕಂಡುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ವಿಜಯದಶಮಿ ಹಾಗೂ ಆಯುಧ ಪೂಜೆ ಹಬ್ಬದ ಮುನ್ನಾ ದಿನವಾದ ಮಂಗಳವಾರ, ಬೆಲೆ ಏರಿಕೆ ನಡುವೆಯೂ ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯಿತು.</p>.<p>ವಿಶೇಷವಾಗಿ ಆಯುಧ ಪೂಜೆಗೆ ಎಲ್ಲರೂ ಬಳಸುವ ಕುಂಬಳಕಾಯಿ, ಹೂವಿನ ಹಾರ, ಪೂಜಾ ಸಾಮಗ್ರಿ ಸೇರಿದಂತೆ ವಾಹನಗಳಿಗೆ ಅಲಂಕಾರ ಮಾಡುವ ಬಾಳೆಕಂದು, ಮಾವಿನ ಸೊಪ್ಪು, ಕಬ್ಬಿನ ಜಲ್ಲೆ ಸೇರಿದಂತೆ ಇತರೆ ಆಲಂಕಾರಿಕ ವಸ್ತುಗಳ ಖರೀದಿಗೆ ಸಾವಿರಾರು ಮಂದಿ ಮುಗಿಬಿದ್ದಿದ್ದರು.</p>.<p>ಹೂವಿನ ದರವಂತೂ ಕಳೆದ ಬಾರಿಗಿಂತ ಅಧಿಕವಾಗಿತ್ತು. ನಗರದ ಕಟ್ಟಿನಕೆರೆ ಮಾರುಕಟ್ಟೆ, ಮಹಾವೀರ ವೃತ್ತ, ಡೈರಿ ವೃತ್ತ, ಸಾಲಿಗಾಮೆ ರಸ್ತೆ, ಸಂತೆಪೇಟೆ ವೃತ್ತ, ಬಡಾವಣೆಗಳ ಪ್ರಮುಖ ವೃತ್ತಗಳಲ್ಲಿ, ಸಂತೆಪೇಟೆ ರಸ್ತೆಯ ಉದ್ದಕ್ಕೂ ಕುಂಬಳಕಾಯಿ ಹೂವು ಸೇರಿದಂತೆ ಇತರೆ ವಸ್ತುಗಳ ಮಾರಾಟ ಜೋರಾಗಿತ್ತು .</p>.<p>ಒಮ್ಮೆಲೇ ಸಾವಿರಾರು ಜನ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರಿಂದ ಹಲವು ವೃತ್ತ ಮತ್ತು ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.</p>.<p>ವಾಣಿಜ್ಯ ಮಳಿಗೆಯ ಮಾಲೀಕರು ಅಂಗಡಿ ಸ್ವಚ್ಛತೆಯಲ್ಲಿ ತೊಡಗಿದ್ದರು. ವಾಹನ ಮಾಲೀಕರು, ತಮ್ಮ ಮನೆಗಳಲ್ಲಿ ಹಾಗೂ ಖಾಸಗಿ ಆಟೋ ವರ್ಕ್ಸ್ನಲ್ಲಿ ವಾಹನಗಳನ್ನು ಸ್ವಚ್ಛಗೊಳಿಸುತ್ತಿರುವ ಹಾಗೂ ಅಂಗಡಿಗೆ ದೀಪಾಲಂಕಾರ ಮಾಡಿರುವ ದೃಶ್ಯಗಳು ಕಂಡುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>