ಹಾಸನ: ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆ ಲಭ್ಯವಿದ್ದು, ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಬಹುಬೇಡಿಕೆಯ ಚಿಕಿತ್ಸಾ ಪದ್ಧತಿಯಾಗಿ ಹೊರಹೊಮ್ಮುತ್ತಿದೆ ಎಂದು ರಾಜೀವ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವಿ. ರಾಜೀವ್ ತಿಳಿಸಿದರು.
ನಗರದ ರಾಜೀವ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ರಾಜೀವ್ ನರ್ಸಿಂಗ್ ಕಾಲೇಜು, ರತ್ನ ನರ್ಸಿಂಗ್ ಕಾಲೇಜು, ರಾಜೀವ್ ಪ್ಯಾರಾ ಮೆಡಿಕಲ್ ಕಾಲೇಜುಗಳ ಸಹಯೋಗದೊಂದಿಗೆ ವಿಶ್ವ ಆಯುರ್ವೇದ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಆಯುರ್ವೇದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.