<p><strong>ಆಲೂರು</strong>: ತಾಲ್ಲೂಕಿನ ರಾಯರಕೊಪ್ಪಲು ಗ್ರಾಮದ ಅಯ್ಯನಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿವೆ.</p>.<p>ಗ್ರಾಮದ ಯೋಗೇಶ್, ಸುರೇಶ್ ಎಂಬುವರು ಕೆರೆಯಲ್ಲಿ ಮೀನು ಸಾಕಣೆ ಮಾಡುತ್ತಿದ್ದಾರೆ.</p>.<p>‘ಮೂರು ವರ್ಷಗಳ ಹಿಂದೆ 30 ಸಾವಿರ ಮೀನು ಮರಿಗಳನ್ನು ಕೆರೆಗೆ ಬಿಟ್ಟಿದ್ದೆವು. ಶುಕ್ರವಾರ 300–500 ಮೀನುಗಳು ಮೃತಪಟ್ಟವು. ಶನಿವಾರವೂ ನೂರಾರು ಮೀನುಗಳು ಮೃತಪಟ್ಟಿವೆ. ಕೆರೆಗೆ ಯಾರೋ ವಿಷ ಬೆರೆಸಿರುವ ಸಾಧ್ಯತೆ ಇದೆ’ ಎಂದು ಯೋಗೇಶ್ ಶಂಕೆ ವ್ಯಕ್ತಪಡಿಸಿದರು.</p>.<p>‘ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದಿದ್ದೇವೆ. ಕೆಂಚಮ್ಮನ ಹೊಸಕೋಟೆ ಹೊರ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ’ ಎಂದರು.</p>.<p>‘ಕೆರೆಯಲ್ಲಿ ನೀರು ಕಡಿಮೆಯಾಗುವ ಜತೆಗೆ ಕಲುಷಿತಗೊಂಡಿರುವ ಸಾಧ್ಯತೆ ಇದೆ. ಅನಾರೋಗ್ಯ ಸಮಸ್ಯೆಯಿಂದಾಗಿ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಭಾನುವಾರ ಭೇಟಿ ನೀಡಿ ಪರಿಶೀಲಿಸುತ್ತೇನೆ’ ಎಂದು ಪಿಡಿಒ ಸಣ್ಣಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು</strong>: ತಾಲ್ಲೂಕಿನ ರಾಯರಕೊಪ್ಪಲು ಗ್ರಾಮದ ಅಯ್ಯನಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿವೆ.</p>.<p>ಗ್ರಾಮದ ಯೋಗೇಶ್, ಸುರೇಶ್ ಎಂಬುವರು ಕೆರೆಯಲ್ಲಿ ಮೀನು ಸಾಕಣೆ ಮಾಡುತ್ತಿದ್ದಾರೆ.</p>.<p>‘ಮೂರು ವರ್ಷಗಳ ಹಿಂದೆ 30 ಸಾವಿರ ಮೀನು ಮರಿಗಳನ್ನು ಕೆರೆಗೆ ಬಿಟ್ಟಿದ್ದೆವು. ಶುಕ್ರವಾರ 300–500 ಮೀನುಗಳು ಮೃತಪಟ್ಟವು. ಶನಿವಾರವೂ ನೂರಾರು ಮೀನುಗಳು ಮೃತಪಟ್ಟಿವೆ. ಕೆರೆಗೆ ಯಾರೋ ವಿಷ ಬೆರೆಸಿರುವ ಸಾಧ್ಯತೆ ಇದೆ’ ಎಂದು ಯೋಗೇಶ್ ಶಂಕೆ ವ್ಯಕ್ತಪಡಿಸಿದರು.</p>.<p>‘ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದಿದ್ದೇವೆ. ಕೆಂಚಮ್ಮನ ಹೊಸಕೋಟೆ ಹೊರ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ’ ಎಂದರು.</p>.<p>‘ಕೆರೆಯಲ್ಲಿ ನೀರು ಕಡಿಮೆಯಾಗುವ ಜತೆಗೆ ಕಲುಷಿತಗೊಂಡಿರುವ ಸಾಧ್ಯತೆ ಇದೆ. ಅನಾರೋಗ್ಯ ಸಮಸ್ಯೆಯಿಂದಾಗಿ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಭಾನುವಾರ ಭೇಟಿ ನೀಡಿ ಪರಿಶೀಲಿಸುತ್ತೇನೆ’ ಎಂದು ಪಿಡಿಒ ಸಣ್ಣಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>