ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ನಿವೃತ್ತಿ: ಹೈಕಮಾಂಡ್ ತೀರ್ಮಾನ- ಸಚಿವ ಗೋಪಾಲಯ್ಯ

Last Updated 25 ಜುಲೈ 2022, 7:59 IST
ಅಕ್ಷರ ಗಾತ್ರ

ಹಾಸನ:ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ದೊಡ್ಡ ನಾಯಕರಿದ್ದಾರೆ. ಅವರ ಸಲಹೆ ಸೂಚನೆ ಪಕ್ಷಕ್ಕೆ ಅವಶ್ಯಕತೆ ಇದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಇಷ್ಟು ವರ್ಷದ ತಮ್ಮ ರಾಜಕೀಯ ಅನುಭವವನ್ನು ಧಾರೆ ಎರೆಯಲಿದ್ದಾರೆ ಎಂದು ಸಚಿವ ಗೋಪಾಲಯ್ಯವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ನಿವೃತ್ತಿ ಘೋಷಣೆ ಕುರಿತು ಪ್ರತಿಕ್ರಿಯೆ ನೀಡಿದ ಗೋಪಾಲಯ್ಯ, ಆಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದ್ದು,ಚರ್ಚೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಶಿರಾಡಿ ಬದಲಿ ರಸ್ತೆ: ಶಿರಾಡಿ ರಸ್ತೆ ಕಾಮಗಾರಿ ವಿಚಾರವಾಗಿ ಬದಲಿ ರಸ್ತೆ ನಿರ್ಮಾಣಕ್ಕೆ ₹4 ಕೋಟಿ ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ಎ.ಟಿ ರಾಮಸ್ವಾಮಿ, ಎಚ್‌.ಕೆ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಎಂಜಿನಿಯರ್ ಶಂಕರೇಗೌಡ, ಮುಖ್ಯ ಎಂಜಿನಿಯರ್ ‌ಮಹೇಶ್, ಹೇಮಾವತಿ ಜಲಾಶಯ ವಿಭಾಗದ ಸೂಪರಿಂಟೆಂಡೆಂಟ್ ಎಂಜಿನಿಯರ್ ನಳಿನಿ,‌ ಕಾರ್ಯಪಾಲಕ ಎಂಜಿನಿಯರ್ ಯೋಗೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT