ಶಿರಾಡಿ ಬದಲಿ ರಸ್ತೆ: ಶಿರಾಡಿ ರಸ್ತೆ ಕಾಮಗಾರಿ ವಿಚಾರವಾಗಿ ಬದಲಿ ರಸ್ತೆ ನಿರ್ಮಾಣಕ್ಕೆ ₹4 ಕೋಟಿ ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ಎ.ಟಿ ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಎಂಜಿನಿಯರ್ ಶಂಕರೇಗೌಡ, ಮುಖ್ಯ ಎಂಜಿನಿಯರ್ ಮಹೇಶ್, ಹೇಮಾವತಿ ಜಲಾಶಯ ವಿಭಾಗದ ಸೂಪರಿಂಟೆಂಡೆಂಟ್ ಎಂಜಿನಿಯರ್ ನಳಿನಿ, ಕಾರ್ಯಪಾಲಕ ಎಂಜಿನಿಯರ್ ಯೋಗೀಶ್ ಹಾಜರಿದ್ದರು.