40 ಗರ್ಭಿಣಿಯರಿಗೆ ಸೀಮಂತ ಮಾಡಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ , ಸ್ತ್ರೀ ರೋಗ ತಜ್ಞ ಡಾ. ಲೋಕೇಶ್ ಗರ್ಭಿಣಿಯರು ಗರ್ಭ ಧರಿಸಿದ ದಿನದಿಂದ ಹೆರಿಗೆ ಆಗುವ ವರೆಗೆ ಎಚ್ಚರಿಕೆಯಿಂದ ಇರಬೇಕು. 3 ತಿಂಗಳ ನಂತರ ಹೆಚ್ಚು ಭಾರ ಎತ್ತಬಾರದು. ಜೋರಾಗಿ ಓಡಾಡ ಬಾರದು. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ವೈದ್ಯರಲ್ಲಿ ಪರೀಕ್ಷಿಸಿ , ಔಷಧಿಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಡಾ ರೇಖಾ, ಡಾ. ಸುಮಾ ಭಾಗವಹಿಸಿದ್ದರು. ಆರೋಗ್ಯ ಇಲಾಖೆಯ ಭಾನುಶ್ರೀ, ಮಂಜಮ್ಮ, ಜ್ಯೋತಿ, ಸುಜಾತ ಸಹಕರಿಸಿದರು.