ಪಟ್ಟಣದಲ್ಲಿ ಭಾನುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ ಕಬ್ಬಳಿಯ ಬಸವೇಶ್ವರ ದೇಗುಲದಲ್ಲಿ ದೇವರಿಗೆ ಅಭಿಷೇಕ, ರಜತಕವಚ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುವುದು. ಬಾಲಗಂಗಾಧರನಾಥ ಸ್ವಾಮೀಜಿ ಪಾದುಕೆಗಳಿಗೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ದೀಪಾರಾಧನೆ ನಂತರ ಮಹಾಮಂಗಳಾರತಿ, ಪೂಜೆ ನೆರವೇರಿಸಲಾಗುವುದು’ ಎಂದು ತಿಳಿಸಿದರು.