<p><strong>ಜಾವಗಲ್:</strong> ಗ್ರಾಮ ಸೇರಿದಂತೆ ಹೋಬಳಿಯ ಗ್ರಾಮಗಳ ಬನಶಂಕರಿ ದೇವಾಲಯಗಳಲ್ಲಿ ಶನಿವಾರ ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ಜಾವಗಲ್ ಗ್ರಾಮದ ಐತಿಹಾಸಿಕ ಹಾಗೂ ಪುರಾತನ ಬನಶಂಕರಿ ದೇವಸ್ಥಾನದಲ್ಲಿ ನೇಕಾರ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಬನದ ಹುಣ್ಣಿಮೆ ಆಚರಿಸಲಾಯಿತು.</p>.<p>ದೇವಾಲಯದಲ್ಲಿ ಮುಂಜಾನೆಯಿಂದಲೇ ಮಹಾಗಣಪತಿ ಪೂಜೆ, ಫಲ ಪಂಚಾಮೃತ ಅಭಿಷೇಕ, ವಸ್ತ್ರಾಲಂಕಾರ ಹಾಗೂ ಪುಷ್ಪಾಲಂಕಾರ ಸೇವೆ ನೆರವೇರಿಸಲಾಯಿತು. ಬಳಿಕ ಸಂಜೆ 6ರ ನಂತರ ದೇವತಾ ಪ್ರಾರ್ಥನೆಯೊಂದಿಗೆ ದುರ್ಗಾ ಹೋಮ, ಗಣಪತಿ ಪೂಜೆ ಹಾಗೂ ಮಹಾ ಪೂರ್ಣಾಹುತಿ ನೀಡಲಾಯಿತು.</p>.<p>ನಂತರ ಉತ್ಸವ ನೆರವೇರಿಸುವ ಜೊತೆಗೆ ಉಯ್ಯಾಲೋತ್ಸವ ನಡೆಸಿ ಅಮ್ಮನವರಿಗೆ ಮಹಾಮಂಗಳಾರತಿ ಮಾಡಿ ದೇವಸ್ಥಾನದಲ್ಲಿ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡುವ ಮೂಲಕ ಬನದ ಹುಣ್ಣಿಮೆ ಕಾರ್ಯಕ್ರಮ ಸಂಪನ್ನಗೊಂಡಿತು.</p>.<p>ಅರ್ಚಕ ಮಂಜುನಾಥ್, ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಮನೋಹರ್ ಅವರು ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಬನದ ಹುಣ್ಣಿಮೆ ಮಹೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾವಗಲ್:</strong> ಗ್ರಾಮ ಸೇರಿದಂತೆ ಹೋಬಳಿಯ ಗ್ರಾಮಗಳ ಬನಶಂಕರಿ ದೇವಾಲಯಗಳಲ್ಲಿ ಶನಿವಾರ ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ಜಾವಗಲ್ ಗ್ರಾಮದ ಐತಿಹಾಸಿಕ ಹಾಗೂ ಪುರಾತನ ಬನಶಂಕರಿ ದೇವಸ್ಥಾನದಲ್ಲಿ ನೇಕಾರ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಬನದ ಹುಣ್ಣಿಮೆ ಆಚರಿಸಲಾಯಿತು.</p>.<p>ದೇವಾಲಯದಲ್ಲಿ ಮುಂಜಾನೆಯಿಂದಲೇ ಮಹಾಗಣಪತಿ ಪೂಜೆ, ಫಲ ಪಂಚಾಮೃತ ಅಭಿಷೇಕ, ವಸ್ತ್ರಾಲಂಕಾರ ಹಾಗೂ ಪುಷ್ಪಾಲಂಕಾರ ಸೇವೆ ನೆರವೇರಿಸಲಾಯಿತು. ಬಳಿಕ ಸಂಜೆ 6ರ ನಂತರ ದೇವತಾ ಪ್ರಾರ್ಥನೆಯೊಂದಿಗೆ ದುರ್ಗಾ ಹೋಮ, ಗಣಪತಿ ಪೂಜೆ ಹಾಗೂ ಮಹಾ ಪೂರ್ಣಾಹುತಿ ನೀಡಲಾಯಿತು.</p>.<p>ನಂತರ ಉತ್ಸವ ನೆರವೇರಿಸುವ ಜೊತೆಗೆ ಉಯ್ಯಾಲೋತ್ಸವ ನಡೆಸಿ ಅಮ್ಮನವರಿಗೆ ಮಹಾಮಂಗಳಾರತಿ ಮಾಡಿ ದೇವಸ್ಥಾನದಲ್ಲಿ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡುವ ಮೂಲಕ ಬನದ ಹುಣ್ಣಿಮೆ ಕಾರ್ಯಕ್ರಮ ಸಂಪನ್ನಗೊಂಡಿತು.</p>.<p>ಅರ್ಚಕ ಮಂಜುನಾಥ್, ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಮನೋಹರ್ ಅವರು ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಬನದ ಹುಣ್ಣಿಮೆ ಮಹೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>